25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನಿಸಿ, ಕಂದಾಯ ನಿರೀಕ್ಷಕರನ್ನು ಅವಾಚ್ಯವಾಗಿ ನಿಂದಿಸಿದ ಘಟನೆ ಜ.18ರಂದು ಮದ್ದಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗದ ಒತ್ತುವರಿಯಾಗಿರುವ ಬಗ್ಗೆ ಪರಿಶೀಲನೆಗಾಗಿ ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ, ಕಂದಾಯ ನಿರೀಕ್ಷಕರು, ಗ್ರಾಮ ಅಭಿವೃದ್ಧಿ ಅಧಿಕಾರಿಯವರೊಂದಿಗೆ ಸದ್ರಿ ಜಾಗಕ್ಕೆ ಸರಕಾರಿ ವಾಹನದಲ್ಲಿ ತೆರಳಿ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಸದ್ರಿ ಸ್ಥಳವನ್ನು ಒತ್ತುವರಿಸಿದ ನಸೀ‌ರ್ ಮತ್ತು ರೌಫ್ ಎಂಬವರು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಅಲ್ಲದೆ ಸ್ಥಳದಲ್ಲಿದ್ದ ಕಂದಾಯ ನಿರೀಕ್ಷಕ ಪ್ರತೀಶ್‌ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಜ.19 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಐಪಿಸಿ 353, 504 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

Related posts

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

Suddi Udaya

ಬೆಳ್ತಂಗಡಿ ದಲಿತ ಮುಖಂಡರ ನಿಯೋಗದಿಂದ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

Suddi Udaya

ಜೂ. 29 : ಉಜಿರೆಯಲ್ಲಿ ರೈನಾಥನ್ ಸ್ಪರ್ಧೆ, ಸಂತೋಷದಾಯಕ ಮಳೆಗಾಲದ ಓಟ: ಮಾದಕ ವ್ಯವಸನದ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶವೇ ರೈನಥಾನ್-2025

Suddi Udaya

ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!