23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

ಬೆಳ್ತಂಗಡಿ : ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಮಂಗಳೂರಿನ ಪಾವೂರು ನಿವಾಸಿಯಾದ ಚಂದ್ರಹಾಸ ಅಮೀನ್ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 4,75,000/- ಮೊತ್ತದ ಚೆಕ್ ಬೌನ್ಸ್ ಪ್ರಕರಣ, ಹಾಗೂ ಅದೇ ನ್ಯಾಯಾಲಯದಲ್ಲಿ ಮುಂಡಾಜೆ ನಿವಾಸಿ ಗುಣಪಾಲ ಎಂ ಎಸ್ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 81,721/- ಮೊತ್ತದ ಚೆಕ್ ಬೌನ್ಸ್ ಪ್ರಕರಣ, ಅದೇ ರೀತಿ ಕಾಜೂರು ನಿವಾಸಿಯಾದ ಸಮೀರ್ ಎಂಬರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 1,00,000/- ಮೊತ್ತದ ಚೆಕ್ ಬೌನ್ಸ್ ಪ್ರಕರಣ ಹಾಗೂ ಮೂಡಬಿದ್ರೆ ನಿವಾಸಿಯಾದ ಸುನಿಲ್ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 45,000/- ಮೊತ್ತದ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳನ್ನು ನಿರ್ದೋಷಿ ಎಂದು ನ್ಯಾಯಾಲಯವು ತೀರ್ಪು ನೀಡಿರುತ್ತದೆ.

ಅದೇ ರೀತಿ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಮುಂಡಾಜೆ ನಿವಾಸಿಯಾದ ಪ್ರಸಾದ್ ಶೆಟ್ಟಿ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 1,00,000/- ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ನಿರ್ದೋಷಿ ಎಂದು ತೀರ್ಮಾನಿಸಿ ನ್ಯಾಯಾಲಯವು ತೀರ್ಪು ನೀಡಿರುತ್ತದೆ.

ಹಾಗೂ ಮಂಗಳೂರಿನ ಸೆಷನ್ಸ್ ನ್ಯಾಯಾಲಯದಲ್ಲಿ ಮುಂಡಾಜೆಯ ನಿವಾಸಿಯಾದ ರವಿ ಎನ್ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 5,65,000/- ಗಳ ಚೆಕ್ಕು ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ನಿರ್ದೋಷಿ ಎಂದು ತೀರ್ಮಾನಿಸಿ ನ್ಯಾಯಾಲಯವು ತೀರ್ಪು ನೀಡಿರುತ್ತದೆ.

ಸದ್ರಿ ಈ ಮೇಲಿನ ಎಲ್ಲಾ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ಲೆಕ್ಸ್ ವಿಷನ್ ಲಾ ಚೇಂಬರ್ಸ್ ( ಬೆಳ್ತಂಗಡಿ ಹಾಗೂ ಬೆಂಗಳೂರು) ನ್ಯಾಯವಾದಿಗಳಾದ ನವಾಜ್ ಶರೀಫ್ ಎ, ಮಮ್ತಾಜ್ ಬೇಗಂ, ಇರ್ಷಾದ್, ಮತ್ತು ಸಪ್ನಾಝ್ ಇವರನ್ನು ಒಳಗೊಂಡ ವಕೀಲರು ತಂಡ ವಾದಿಸಿದ್ದರು.

Related posts

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya

ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳ ದಾಳಿ: ಅಪಾರ ಹಾನಿ

Suddi Udaya

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

Suddi Udaya

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!