22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

ಬೆಳ್ತಂಗಡಿ : ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಮಂಗಳೂರಿನ ಪಾವೂರು ನಿವಾಸಿಯಾದ ಚಂದ್ರಹಾಸ ಅಮೀನ್ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 4,75,000/- ಮೊತ್ತದ ಚೆಕ್ ಬೌನ್ಸ್ ಪ್ರಕರಣ, ಹಾಗೂ ಅದೇ ನ್ಯಾಯಾಲಯದಲ್ಲಿ ಮುಂಡಾಜೆ ನಿವಾಸಿ ಗುಣಪಾಲ ಎಂ ಎಸ್ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 81,721/- ಮೊತ್ತದ ಚೆಕ್ ಬೌನ್ಸ್ ಪ್ರಕರಣ, ಅದೇ ರೀತಿ ಕಾಜೂರು ನಿವಾಸಿಯಾದ ಸಮೀರ್ ಎಂಬರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 1,00,000/- ಮೊತ್ತದ ಚೆಕ್ ಬೌನ್ಸ್ ಪ್ರಕರಣ ಹಾಗೂ ಮೂಡಬಿದ್ರೆ ನಿವಾಸಿಯಾದ ಸುನಿಲ್ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 45,000/- ಮೊತ್ತದ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳನ್ನು ನಿರ್ದೋಷಿ ಎಂದು ನ್ಯಾಯಾಲಯವು ತೀರ್ಪು ನೀಡಿರುತ್ತದೆ.

ಅದೇ ರೀತಿ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಮುಂಡಾಜೆ ನಿವಾಸಿಯಾದ ಪ್ರಸಾದ್ ಶೆಟ್ಟಿ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 1,00,000/- ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ನಿರ್ದೋಷಿ ಎಂದು ತೀರ್ಮಾನಿಸಿ ನ್ಯಾಯಾಲಯವು ತೀರ್ಪು ನೀಡಿರುತ್ತದೆ.

ಹಾಗೂ ಮಂಗಳೂರಿನ ಸೆಷನ್ಸ್ ನ್ಯಾಯಾಲಯದಲ್ಲಿ ಮುಂಡಾಜೆಯ ನಿವಾಸಿಯಾದ ರವಿ ಎನ್ ಎಂಬವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ 5,65,000/- ಗಳ ಚೆಕ್ಕು ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು ನಿರ್ದೋಷಿ ಎಂದು ತೀರ್ಮಾನಿಸಿ ನ್ಯಾಯಾಲಯವು ತೀರ್ಪು ನೀಡಿರುತ್ತದೆ.

ಸದ್ರಿ ಈ ಮೇಲಿನ ಎಲ್ಲಾ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ಲೆಕ್ಸ್ ವಿಷನ್ ಲಾ ಚೇಂಬರ್ಸ್ ( ಬೆಳ್ತಂಗಡಿ ಹಾಗೂ ಬೆಂಗಳೂರು) ನ್ಯಾಯವಾದಿಗಳಾದ ನವಾಜ್ ಶರೀಫ್ ಎ, ಮಮ್ತಾಜ್ ಬೇಗಂ, ಇರ್ಷಾದ್, ಮತ್ತು ಸಪ್ನಾಝ್ ಇವರನ್ನು ಒಳಗೊಂಡ ವಕೀಲರು ತಂಡ ವಾದಿಸಿದ್ದರು.

Related posts

ಅಂಡಿಂಜೆ ಗ್ರಾ.ಪಂ. ಕಾರ್ಯದರ್ಶಿ ಶ್ರೀಮತಿ ಚಂಪಾ ನಿಧನ

Suddi Udaya

ಮಡಂತ್ಯಾರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ : ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದಲ್ಲಿ ಗುರುತಿಸ್ಪಟ್ಟ ಕಾಲೇಜು ಎಕ್ಸೆಲ್

Suddi Udaya

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ

Suddi Udaya
error: Content is protected !!