ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

Suddi Udaya

ಚಾರ್ಮಾಡಿ: ನವದೆಹಲಿ ಮಂಗಳೂರು-ಮೂಡಿಗೆರೆ-ತುಮಕೂರು ನಡುವಿನ ರಾಷ್ಟ್ರೀಯ ಹೆದ್ದಾರಿ 73ರ (ಚಾರ್ಮಾಡಿ ಘಾಟ್) ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆ ಮಾಡಲು ಅನುಮೋದನೆ ದೊರಕ್ಕಿದ್ದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ಇಪಿಸಿ ಮಾದರಿಯಲ್ಲಿ 10.8 ಕಿ.ಮೀ ರಸ್ತೆಯ ವಿಸ್ತರಣೆ ಮಾಡಲಾಗುತ್ತದೆ. ಈ ರಸ್ತೆಯನ್ನು ದ್ವಿಪಥ ರಸ್ತೆಯಾಗಿ ಪರಿವರ್ತಿಸಲಾಗುತ್ತದೆ. ಚಾರ್ಮಾಡಿ ಘಾಟ್ ನ ಗುಡ್ಡಗಾಡು ಪ್ರದೇಶದಲ್ಲಿ ಕೈಗೆತ್ತಿಕೊಳ್ಳುವಂತಹ ಉಪಕ್ರಮವು ಸವಾಲಿನದ್ದಾಗಿದೆ. ಇದರೊಂದಿಗೆ ಸಂಚಾರ ವ್ಯವಸ್ಥೆ ಗಣನೀಯವಾಗಿ ಸುಧಾರಣೆಯಾಗಲಿದೆ’ ಎಂದು ತಿಳಿಸಿದ್ದಾರೆ.

Leave a Comment

error: Content is protected !!