September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

ನಡ: ಸುಮಾರು 23 ವರ್ಷಗಳಿಂದ ನಡ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿ ಇವರ ಬೀಳ್ಕೊಡುಗೆ ಸಮಾರಂಭವನ್ನು ಅಂಗನವಾಡಿ ಬಾಲವಿಕಾಸ ಸಮಿತಿ, ಪೋಷಕರು, ಸತ್ಯಶ್ರೀ ಮತ್ತು ನವೋದಯ ಸ್ತ್ರೀ ಶಕ್ತಿ ಸಂಘ, ಹಳೆ ವಿದ್ಯಾರ್ಥಿಗಳ ಸಂಘ, ಆರೋಗ್ಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ನಡ ಇದರ ವತಿಯಿಂದ ಗ್ರಾಮ ಪಂಚಾಯತ್ ನಡ ಸಮಾಜ ಮಂದಿರದಲ್ಲಿ ಸಂಭ್ರಮದಿಂದ ನಡೆಸಲಾಯಿತು.

ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಕಾರ್ಯಕ್ರಮದಲ್ಲಿ ರಾಜೀವಿಯವರಿಗೆ ಸನ್ಮಾನಿಸಲಾಯಿತು. ಅಂಗನವಾಡಿ ಕೇಂದ್ರಕ್ಕೆ 10 ಲೀ. ಕುಕ್ಕರ್ ಮತ್ತು ಫ್ಯಾನ್ ಕೊಡುಗೆಯಾಗಿ ನೀಡಲಾಯಿತು. ಸುಮಾರು 2 ವರ್ಷಗಳಿಂದ ನಡ ಅಂಗನವಾಡಿ ಕೇಂದ್ರಕ್ಕೆ ಉಚಿತವಾಗಿ ತರಕಾರಿಯನ್ನು ಒದಗಿಸಿಕೊಡುತ್ತಿದ್ದ ವಲೇರಿಯನ್ ವೇಗಸ್ ಗುರಿಕಂಡ ಇವರನ್ನು ಗುರುತಿಸಿ ಅಂಗನವಾಡಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ. ಪಂ ಸದಸ್ಯರು, ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ನಡ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಧರಣೇಂದ್ರ ಜೈನ್ ನಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೀನಾಕ್ಷಿ.ಕೆ ಬಂಡಾರಿಕೋಡಿ ಕಾರ್ಯಕ್ರಮ ನಿರೂಪಿಸಿದರು, ವಸಂತ ವಿ ಜಿ ಕೂಲ್ ನಡ ವಂದಿಸಿದರು.

Related posts

ಬೆಳ್ತಂಗಡಿಯಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭ

Suddi Udaya

ಜೂ.15-21: ಬಳಂಜದಲ್ಲಿ ಉಚಿತ ಯೋಗ ಶಿಬಿರ- ಸಾರ್ವಜನಿಕರಿಗೆ ಮುಕ್ತ ಅವಕಾಶ

Suddi Udaya

ಉದ್ಯೋಗದ ಪ್ರಥಮ ವೇತನ ಬಾರ್ಯ ಶ್ರೀ ಮಹಾವಿಷ್ಣು ಕ್ಷೇತ್ರಕ್ಕೆ ಸಮರ್ಪಣೆ

Suddi Udaya

ಉಜಿರೆ ಅನುಗ್ರಹ ಶಾಲಾ ಪಾಲಕ ಪೋಷಕರ ಸಭೆ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ : ತಡೆಗೋಡೆ ಏಕಾಏಕಿ ಕುಸಿದು ಬಿದ್ದು ಓರ್ವ ಸಾವು

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya
error: Content is protected !!