23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

ನಡ: ಸುಮಾರು 23 ವರ್ಷಗಳಿಂದ ನಡ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿ ಇವರ ಬೀಳ್ಕೊಡುಗೆ ಸಮಾರಂಭವನ್ನು ಅಂಗನವಾಡಿ ಬಾಲವಿಕಾಸ ಸಮಿತಿ, ಪೋಷಕರು, ಸತ್ಯಶ್ರೀ ಮತ್ತು ನವೋದಯ ಸ್ತ್ರೀ ಶಕ್ತಿ ಸಂಘ, ಹಳೆ ವಿದ್ಯಾರ್ಥಿಗಳ ಸಂಘ, ಆರೋಗ್ಯ ಇಲಾಖೆ ಮತ್ತು ಗ್ರಾಮ ಪಂಚಾಯತ್ ನಡ ಇದರ ವತಿಯಿಂದ ಗ್ರಾಮ ಪಂಚಾಯತ್ ನಡ ಸಮಾಜ ಮಂದಿರದಲ್ಲಿ ಸಂಭ್ರಮದಿಂದ ನಡೆಸಲಾಯಿತು.

ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಕಾರ್ಯಕ್ರಮದಲ್ಲಿ ರಾಜೀವಿಯವರಿಗೆ ಸನ್ಮಾನಿಸಲಾಯಿತು. ಅಂಗನವಾಡಿ ಕೇಂದ್ರಕ್ಕೆ 10 ಲೀ. ಕುಕ್ಕರ್ ಮತ್ತು ಫ್ಯಾನ್ ಕೊಡುಗೆಯಾಗಿ ನೀಡಲಾಯಿತು. ಸುಮಾರು 2 ವರ್ಷಗಳಿಂದ ನಡ ಅಂಗನವಾಡಿ ಕೇಂದ್ರಕ್ಕೆ ಉಚಿತವಾಗಿ ತರಕಾರಿಯನ್ನು ಒದಗಿಸಿಕೊಡುತ್ತಿದ್ದ ವಲೇರಿಯನ್ ವೇಗಸ್ ಗುರಿಕಂಡ ಇವರನ್ನು ಗುರುತಿಸಿ ಅಂಗನವಾಡಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ. ಪಂ ಸದಸ್ಯರು, ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ನಡ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಧರಣೇಂದ್ರ ಜೈನ್ ನಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೀನಾಕ್ಷಿ.ಕೆ ಬಂಡಾರಿಕೋಡಿ ಕಾರ್ಯಕ್ರಮ ನಿರೂಪಿಸಿದರು, ವಸಂತ ವಿ ಜಿ ಕೂಲ್ ನಡ ವಂದಿಸಿದರು.

Related posts

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಅರಸಿನಮಕ್ಕಿ: ಕುಡಿಯುವ ನೀರಿನ ಸ್ಥಾವರ ಉದ್ಘಾಟನೆ

Suddi Udaya

ಸರಕಾರಿ ಬಸ್ಸಿನಲ್ಲೇ ಹೃದಯಾಘಾತವಾಗಿ ಲಾಯಿಲದ ಇಲೆಕ್ಟ್ರೀಷಿಯನ್ ತಾಜ್ ಬಾವುಂಞಿ ನಿಧನ

Suddi Udaya

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya
error: Content is protected !!