23.3 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

ಪಟ್ರಮೆ : ವಿದ್ಯಾರ್ಥಿಗಳು ಕೇವಲ ಅವರವರ ತರಗತಿಗೆ ಸೀಮಿತವಾಗಿರದೆ, ಭಿನ್ನ ವಿದ್ಯಾರ್ಥಿಗಳೊಂದಿಗೆ ಕಲಿಕಾ ವಿಚಾರಗಳನ್ನು ಹಂಚಿಕೊಂಡು ಕಲಿತಾಗ ಅದು ಹೆಚ್ಚು ನೆನಪಿನಲ್ಲಿ ಉಳಿದುಕೊಳ್ಳುತ್ತದೆ. ವಿದ್ಯಾರ್ಥಿಗಳು ನಿತ್ಯ ತರಗತಿಯೊಳಗಿನ ಪಾಠಗಳನ್ನು ಕಲಿಯುವಾಗ ಅಪರೂಪಕೊಮ್ಮೆಯಾದರೂ ಕಾರ್ಯಗಾರಗಳಂತಹ ಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಾಗ ಕಲಿಕೆಯಲ್ಲಿನ ಆಸಕ್ತಿ ಹೆಚ್ಚಾಗಲು ಸಹಕಾರಿಯಾಗುತ್ತದೆ ಎಂದು ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಅಭಿಪ್ರಾಯಪಟ್ಟರು.

ಅವರು ಶಾಲೆಯ ಕನ್ನಡ ವಿಭಾಗದ ವತಿಯಿಂದ ಜ.19ರಂದು ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆದ ಕನ್ನಡ ವ್ಯಾಕರಣ ಮಾಲಿಕೆ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು. ಆಧುನಿಕ ಶಿಕ್ಷಣ ಪದ್ಧತಿಯಲ್ಲಿ ಹೊಸ ಹೊಸ ಪ್ರಯೋಗಗಳು ನಡೆದಾಗ ವಿದ್ಯಾರ್ಥಿಗಳು ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸಿಕೊಳ್ಳುತ್ತಾರೆ ಶಿಕ್ಷಕರಿಗೂ ಇದು ಹೊಸ ಅನುಭವವನ್ನು ನೀಡುತ್ತದೆ ಎಂದರು.

ಶಾಲೆಯ ಕನ್ನಡ ವಿಭಾಗದ ಶಿಕ್ಷಕಿಯರಾದ ಸುಪ್ರೀತಾ ಎ ಹಾಗೂ ಸ್ವಾತಿ ಕೆ.ವಿ ಕಾರ್ಯಾಗಾರದ ಅವಧಿಯಲ್ಲಿ ಕನ್ನಡ ವ್ಯಾಕರಣದಲ್ಲಿ ತಿಳಿಸಲಾಗಿರುವ ಕನ್ನಡ ಸಂಧಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಸುಮಾರು 2 ಗಂಟೆಗಳ ಕಾಲ ನಡೆದ ಕಾರ್ಯಾಗಾರದಲ್ಲಿ 5ನೇ ತರಗತಿಯಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದರು. ಕಾರ್ಯಗಾರವು ಪ್ರಶ್ನೋತ್ತರ ಹಾಗೂ ಸಂವಾದ ರೀತಿಯಲ್ಲಿ ಮೂಡಿಬಂದಿತು.
ಶಾಲೆಯ ಇತರ ಶಿಕ್ಷಕರು ಕೂಡ ಕಾರ್ಯಗಾರದಲ್ಲಿ ಪಾಲ್ಗೊಂಡರು.

Related posts

ಬೆಳ್ತಂಗಡಿ: ಆ.8 ರಂದು ವಿದ್ಯುತ್ ನಿಲುಗಡೆ

Suddi Udaya

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya
error: Content is protected !!