23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

ಪಟ್ರಮೆ : ವಿದ್ಯಾರ್ಥಿಗಳು ಕೇವಲ ಅವರವರ ತರಗತಿಗೆ ಸೀಮಿತವಾಗಿರದೆ, ಭಿನ್ನ ವಿದ್ಯಾರ್ಥಿಗಳೊಂದಿಗೆ ಕಲಿಕಾ ವಿಚಾರಗಳನ್ನು ಹಂಚಿಕೊಂಡು ಕಲಿತಾಗ ಅದು ಹೆಚ್ಚು ನೆನಪಿನಲ್ಲಿ ಉಳಿದುಕೊಳ್ಳುತ್ತದೆ. ವಿದ್ಯಾರ್ಥಿಗಳು ನಿತ್ಯ ತರಗತಿಯೊಳಗಿನ ಪಾಠಗಳನ್ನು ಕಲಿಯುವಾಗ ಅಪರೂಪಕೊಮ್ಮೆಯಾದರೂ ಕಾರ್ಯಗಾರಗಳಂತಹ ಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಾಗ ಕಲಿಕೆಯಲ್ಲಿನ ಆಸಕ್ತಿ ಹೆಚ್ಚಾಗಲು ಸಹಕಾರಿಯಾಗುತ್ತದೆ ಎಂದು ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಅಭಿಪ್ರಾಯಪಟ್ಟರು.

ಅವರು ಶಾಲೆಯ ಕನ್ನಡ ವಿಭಾಗದ ವತಿಯಿಂದ ಜ.19ರಂದು ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆದ ಕನ್ನಡ ವ್ಯಾಕರಣ ಮಾಲಿಕೆ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು. ಆಧುನಿಕ ಶಿಕ್ಷಣ ಪದ್ಧತಿಯಲ್ಲಿ ಹೊಸ ಹೊಸ ಪ್ರಯೋಗಗಳು ನಡೆದಾಗ ವಿದ್ಯಾರ್ಥಿಗಳು ಕಲಿಕೆಯಲ್ಲಿ ಆಸಕ್ತಿಯನ್ನು ಮೂಡಿಸಿಕೊಳ್ಳುತ್ತಾರೆ ಶಿಕ್ಷಕರಿಗೂ ಇದು ಹೊಸ ಅನುಭವವನ್ನು ನೀಡುತ್ತದೆ ಎಂದರು.

ಶಾಲೆಯ ಕನ್ನಡ ವಿಭಾಗದ ಶಿಕ್ಷಕಿಯರಾದ ಸುಪ್ರೀತಾ ಎ ಹಾಗೂ ಸ್ವಾತಿ ಕೆ.ವಿ ಕಾರ್ಯಾಗಾರದ ಅವಧಿಯಲ್ಲಿ ಕನ್ನಡ ವ್ಯಾಕರಣದಲ್ಲಿ ತಿಳಿಸಲಾಗಿರುವ ಕನ್ನಡ ಸಂಧಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಸುಮಾರು 2 ಗಂಟೆಗಳ ಕಾಲ ನಡೆದ ಕಾರ್ಯಾಗಾರದಲ್ಲಿ 5ನೇ ತರಗತಿಯಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದರು. ಕಾರ್ಯಗಾರವು ಪ್ರಶ್ನೋತ್ತರ ಹಾಗೂ ಸಂವಾದ ರೀತಿಯಲ್ಲಿ ಮೂಡಿಬಂದಿತು.
ಶಾಲೆಯ ಇತರ ಶಿಕ್ಷಕರು ಕೂಡ ಕಾರ್ಯಗಾರದಲ್ಲಿ ಪಾಲ್ಗೊಂಡರು.

Related posts

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ

Suddi Udaya

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya
error: Content is protected !!