25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

ಬೆಳ್ತಂಗಡಿ: ಉತ್ತರ ಪ್ರದೇಶದ ಸರಯೂ ನದಿತೀರದ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ (ಬಾಲರಾಮ) ಮೂರ್ತಿ ಪ್ರತಿಷ್ಠಾಪನೆಯ ಪುಣ್ಯ ಕಾರ್ಯ ಕಣ್ತುಂಬಿಕೊಳ್ಳಲು ಇಡೀ ರಾಷ್ಟ್ರವೇ 500 ವರ್ಷಗಳಿಂದ ಕಾಯುತ್ತಿದ್ದ ಕಾಲ ಈಗ ಕೂಡಿ ಬಂದಿದೆ. ಜ.22 ಸೋಮವಾರದಂದು ಅಭಿಜಿನ್ ಶುಭ ಮುಹೂರ್ತದಲ್ಲಿ ಅಯೋಧ್ಯೆಯ ಶ್ರೀರಾಮ ಜನ್ಮಸ್ಥಾನದಲ್ಲಿ ನಿರ್ಮಾಣವಾಗಿರುವ ಭವ್ಯ ಮಂದಿರದ ನೆಲ ಅಂತಸ್ತಿನಲ್ಲಿರುವ ಗರ್ಭಗುಡಿಯಲ್ಲಿ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ನೆರವೇರಲಿದೆ.

ಈ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನಾದ್ಯಂತ ಶ್ರೀ ರಾಮನ ಸಂಭ್ರಮಿಸಲು ರಾಮಭಕ್ತರು ತಯಾರಿ ನಡೆಸುತ್ತಿದ್ದಾರೆ. ಹಾಗಾಗಿ ಬೆಳ್ತಂಗಡಿಯಲ್ಲಿ ರಾಮನ ಭಾವಚಿತ್ರವಿರುವ ಬಂಟಿಂಗ್ಸ್, ಧ್ವಜ, ಶಾಲುಗಳು, ಟಿ-ಶರ್ಟ್ ಸೇರಿದಂತೆ ಹಲವು ವಸ್ತುಗಳಿಗೆ ಬೇಡಿಕೆ ಹೆಚ್ಚಾಗಿದೆ.

ಕಳೆದ ಎರಡು ವಾರಗಳಿಂದ ಬೆಳ್ತಂಗಡಿಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದು ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಜನರು ತಮ್ಮ ಊರನ್ನು ಕೇಸರಿಮಯ ಮಾಡಲು ರಾಮಭಕ್ತರು ಸಜ್ಜಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನಾದ್ಯಂತ ಶ್ರೀ ರಾಮನ ಭಾವಚಿತ್ರವಿರುವ ಬ್ಯಾನರ್ ಗಳು ಹಾಗೂ ತಾಲೂಕಿನ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ರಾಮಭಕ್ತರು ಸಿದ್ಧರಾಗಿದ್ದಾರೆ

Related posts

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಬಂದಾರು, ಮೊಗ್ರು ಶಕ್ತಿ ಕೇಂದ್ರದ ಭಾಜಪ ಕಾರ್ಯಕರ್ತರ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

Suddi Udaya

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!