23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

ಬೆಳ್ತಂಗಡಿ: ಉತ್ತರ ಪ್ರದೇಶದ ಸರಯೂ ನದಿತೀರದ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ (ಬಾಲರಾಮ) ಮೂರ್ತಿ ಪ್ರತಿಷ್ಠಾಪನೆಯ ಪುಣ್ಯ ಕಾರ್ಯ ಕಣ್ತುಂಬಿಕೊಳ್ಳಲು ಇಡೀ ರಾಷ್ಟ್ರವೇ 500 ವರ್ಷಗಳಿಂದ ಕಾಯುತ್ತಿದ್ದ ಕಾಲ ಈಗ ಕೂಡಿ ಬಂದಿದೆ. ಜ.22 ಸೋಮವಾರದಂದು ಅಭಿಜಿನ್ ಶುಭ ಮುಹೂರ್ತದಲ್ಲಿ ಅಯೋಧ್ಯೆಯ ಶ್ರೀರಾಮ ಜನ್ಮಸ್ಥಾನದಲ್ಲಿ ನಿರ್ಮಾಣವಾಗಿರುವ ಭವ್ಯ ಮಂದಿರದ ನೆಲ ಅಂತಸ್ತಿನಲ್ಲಿರುವ ಗರ್ಭಗುಡಿಯಲ್ಲಿ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ನೆರವೇರಲಿದೆ.

ಈ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನಾದ್ಯಂತ ಶ್ರೀ ರಾಮನ ಸಂಭ್ರಮಿಸಲು ರಾಮಭಕ್ತರು ತಯಾರಿ ನಡೆಸುತ್ತಿದ್ದಾರೆ. ಹಾಗಾಗಿ ಬೆಳ್ತಂಗಡಿಯಲ್ಲಿ ರಾಮನ ಭಾವಚಿತ್ರವಿರುವ ಬಂಟಿಂಗ್ಸ್, ಧ್ವಜ, ಶಾಲುಗಳು, ಟಿ-ಶರ್ಟ್ ಸೇರಿದಂತೆ ಹಲವು ವಸ್ತುಗಳಿಗೆ ಬೇಡಿಕೆ ಹೆಚ್ಚಾಗಿದೆ.

ಕಳೆದ ಎರಡು ವಾರಗಳಿಂದ ಬೆಳ್ತಂಗಡಿಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದು ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಜನರು ತಮ್ಮ ಊರನ್ನು ಕೇಸರಿಮಯ ಮಾಡಲು ರಾಮಭಕ್ತರು ಸಜ್ಜಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನಾದ್ಯಂತ ಶ್ರೀ ರಾಮನ ಭಾವಚಿತ್ರವಿರುವ ಬ್ಯಾನರ್ ಗಳು ಹಾಗೂ ತಾಲೂಕಿನ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ರಾಮಭಕ್ತರು ಸಿದ್ಧರಾಗಿದ್ದಾರೆ

Related posts

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್ ಉರೂಸ್ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya
error: Content is protected !!