September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

ಬೆಳ್ತಂಗಡಿ: ಉತ್ತರ ಪ್ರದೇಶದ ಸರಯೂ ನದಿತೀರದ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ (ಬಾಲರಾಮ) ಮೂರ್ತಿ ಪ್ರತಿಷ್ಠಾಪನೆಯ ಪುಣ್ಯ ಕಾರ್ಯ ಕಣ್ತುಂಬಿಕೊಳ್ಳಲು ಇಡೀ ರಾಷ್ಟ್ರವೇ 500 ವರ್ಷಗಳಿಂದ ಕಾಯುತ್ತಿದ್ದ ಕಾಲ ಈಗ ಕೂಡಿ ಬಂದಿದೆ. ಜ.22 ಸೋಮವಾರದಂದು ಅಭಿಜಿನ್ ಶುಭ ಮುಹೂರ್ತದಲ್ಲಿ ಅಯೋಧ್ಯೆಯ ಶ್ರೀರಾಮ ಜನ್ಮಸ್ಥಾನದಲ್ಲಿ ನಿರ್ಮಾಣವಾಗಿರುವ ಭವ್ಯ ಮಂದಿರದ ನೆಲ ಅಂತಸ್ತಿನಲ್ಲಿರುವ ಗರ್ಭಗುಡಿಯಲ್ಲಿ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ನೆರವೇರಲಿದೆ.

ಈ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನಾದ್ಯಂತ ಶ್ರೀ ರಾಮನ ಸಂಭ್ರಮಿಸಲು ರಾಮಭಕ್ತರು ತಯಾರಿ ನಡೆಸುತ್ತಿದ್ದಾರೆ. ಹಾಗಾಗಿ ಬೆಳ್ತಂಗಡಿಯಲ್ಲಿ ರಾಮನ ಭಾವಚಿತ್ರವಿರುವ ಬಂಟಿಂಗ್ಸ್, ಧ್ವಜ, ಶಾಲುಗಳು, ಟಿ-ಶರ್ಟ್ ಸೇರಿದಂತೆ ಹಲವು ವಸ್ತುಗಳಿಗೆ ಬೇಡಿಕೆ ಹೆಚ್ಚಾಗಿದೆ.

ಕಳೆದ ಎರಡು ವಾರಗಳಿಂದ ಬೆಳ್ತಂಗಡಿಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದು ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಜನರು ತಮ್ಮ ಊರನ್ನು ಕೇಸರಿಮಯ ಮಾಡಲು ರಾಮಭಕ್ತರು ಸಜ್ಜಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನಾದ್ಯಂತ ಶ್ರೀ ರಾಮನ ಭಾವಚಿತ್ರವಿರುವ ಬ್ಯಾನರ್ ಗಳು ಹಾಗೂ ತಾಲೂಕಿನ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ರಾಮಭಕ್ತರು ಸಿದ್ಧರಾಗಿದ್ದಾರೆ

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

Suddi Udaya

ನ್ಯೂ ರೋಹಿಣಿ ಜ್ಯೂಸ್ ಸೆಂಟರ್ ಮಾಲಕ ಧನಂಜಯ ಹೃದಯಾಘಾತದಿಂದ ನಿಧನ: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಇದ್ದರೂ ದೊರೆಯದ ಸೌಲಭ್ಯ: ಸಾರ್ವಜನಿಕರ ಆಕ್ರೋಶ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳದಲ್ಲಿ “ನಲಿಯೋಣ ಬಾ” ರಂಗಶಿಬಿರ ಉದ್ಘಾಟನೆ

Suddi Udaya

ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya
error: Content is protected !!