22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

ಬೆಳ್ತಂಗಡಿ: ಉತ್ತರ ಪ್ರದೇಶದ ಸರಯೂ ನದಿತೀರದ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ (ಬಾಲರಾಮ) ಮೂರ್ತಿ ಪ್ರತಿಷ್ಠಾಪನೆಯ ಪುಣ್ಯ ಕಾರ್ಯ ಕಣ್ತುಂಬಿಕೊಳ್ಳಲು ಇಡೀ ರಾಷ್ಟ್ರವೇ 500 ವರ್ಷಗಳಿಂದ ಕಾಯುತ್ತಿದ್ದ ಕಾಲ ಈಗ ಕೂಡಿ ಬಂದಿದೆ. ಜ.22 ಸೋಮವಾರದಂದು ಅಭಿಜಿನ್ ಶುಭ ಮುಹೂರ್ತದಲ್ಲಿ ಅಯೋಧ್ಯೆಯ ಶ್ರೀರಾಮ ಜನ್ಮಸ್ಥಾನದಲ್ಲಿ ನಿರ್ಮಾಣವಾಗಿರುವ ಭವ್ಯ ಮಂದಿರದ ನೆಲ ಅಂತಸ್ತಿನಲ್ಲಿರುವ ಗರ್ಭಗುಡಿಯಲ್ಲಿ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ನೆರವೇರಲಿದೆ.

ಈ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನಾದ್ಯಂತ ಶ್ರೀ ರಾಮನ ಸಂಭ್ರಮಿಸಲು ರಾಮಭಕ್ತರು ತಯಾರಿ ನಡೆಸುತ್ತಿದ್ದಾರೆ. ಹಾಗಾಗಿ ಬೆಳ್ತಂಗಡಿಯಲ್ಲಿ ರಾಮನ ಭಾವಚಿತ್ರವಿರುವ ಬಂಟಿಂಗ್ಸ್, ಧ್ವಜ, ಶಾಲುಗಳು, ಟಿ-ಶರ್ಟ್ ಸೇರಿದಂತೆ ಹಲವು ವಸ್ತುಗಳಿಗೆ ಬೇಡಿಕೆ ಹೆಚ್ಚಾಗಿದೆ.

ಕಳೆದ ಎರಡು ವಾರಗಳಿಂದ ಬೆಳ್ತಂಗಡಿಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದು ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಜನರು ತಮ್ಮ ಊರನ್ನು ಕೇಸರಿಮಯ ಮಾಡಲು ರಾಮಭಕ್ತರು ಸಜ್ಜಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನಾದ್ಯಂತ ಶ್ರೀ ರಾಮನ ಭಾವಚಿತ್ರವಿರುವ ಬ್ಯಾನರ್ ಗಳು ಹಾಗೂ ತಾಲೂಕಿನ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ರಾಮಭಕ್ತರು ಸಿದ್ಧರಾಗಿದ್ದಾರೆ

Related posts

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉಜಿರೆ ವರ್ತಕರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನ

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬಂದಾರು ಗ್ರಾಮ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!