23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

ಕೊಯ್ಯೂರು : ಇಲ್ಲಿಯ ಸುದೆಮುಗೇರು ಎಂಬಲ್ಲಿ, ಸೋಮಾವತಿ ನದಿ ಕಿನಾರೆಯಿಂದ ಹಿಟಾಚಿ ಬಳಸಿ, ಮರಳು ಕಳವು ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರು ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ಆರೋಪಿಗಳ ಸಹಿತ ಸ್ಥಳದಲ್ಲಿದ್ದ ಅಂದಾಜು ಒಟ್ಟು ರೂ 23,56,000/- ಮೌಲ್ಯದ ವಾಹನ ಹಾಗೂ ಅಂದಾಜು ರೂ 3,000/- ಮೌಲ್ಯದ ಮರಳನ್ನು ವಶಪಡಿಸಿಕೊಂಡ ಘಟನೆ ಜ.19ರಂದು ನಡೆದಿದೆ.

ಜ.19 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಸುದೆಮುಗೇರು ಎಂಬಲ್ಲಿ, ಸೋಮಾವತಿ ನದಿ ಕಿನಾರೆಯಿಂದ ಹಿಟಾಚಿ ಬಳಸಿ, ಮರಳು ಕಳವು ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರು ಮಾಡುತ್ತಿದ್ದಾಗ, ಮುರಳಿಧರ ನಾಯ್ಕ ಕೆ.ಜೆ , ಪಿಎಸ್ಐ (ಕಾ&ಸು) ಬೆಳ್ತಂಗಡಿ ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ್ದು, ಆರೋಪಿಗಳಾದ ಬಿ. ರಹೀಮ್, ನಾಸೀರುದ್ದೀನ್ @ ನಾಸಿರ್ , ಸಂಶುದ್ದೀನ್ ಮತ್ತು ಅಬ್ದುಲ್ ಮಜೀದ್ ಎಂಬವರುಗಳು ನದಿ ಕಿನಾರೆಗೆ ಜಾಲರಿ ಅಳವಡಿಸಿ, ಹಿಟಾಚಿ ಬಳಸಿ, ನಂಬ್ರ ಕೆಎ 12 ಬಿ 4805 ಟಿಪ್ಪರ್ ಲಾರಿಯಲ್ಲಿ ಚರಳು ಮಿಶ್ರಿತ ಮರಳು ಕಳ್ಳತನ ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರಿ ನಡೆಸುತ್ತಿದ್ದುದನ್ನು ಪತ್ತೆ ಮಾಡಿರುತ್ತಾರೆ. ಸ್ಥಳದಲ್ಲಿದ್ದ ಅಂದಾಜು ಒಟ್ಟು ರೂ 23,56,000/- ಮೌಲ್ಯದ ವಾಹನ ಹಾಗೂ ಅಂದಾಜು ರೂ 3,000/- ಮೌಲ್ಯದ ಮರಳನ್ನು ಸ್ವಾಧೀನಪಡಿಸಿ ಆರೋಪಿಗಳ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 04/2024 ಕಲಂ: 379 ಜೊತೆಗೆ 34 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ನಾರಾವಿ ಗ್ರಾಮ ಪಂಚಾಯತಿಗೆ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ

Suddi Udaya

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!