25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

ಕೊಯ್ಯೂರು : ಇಲ್ಲಿಯ ಸುದೆಮುಗೇರು ಎಂಬಲ್ಲಿ, ಸೋಮಾವತಿ ನದಿ ಕಿನಾರೆಯಿಂದ ಹಿಟಾಚಿ ಬಳಸಿ, ಮರಳು ಕಳವು ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರು ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ಆರೋಪಿಗಳ ಸಹಿತ ಸ್ಥಳದಲ್ಲಿದ್ದ ಅಂದಾಜು ಒಟ್ಟು ರೂ 23,56,000/- ಮೌಲ್ಯದ ವಾಹನ ಹಾಗೂ ಅಂದಾಜು ರೂ 3,000/- ಮೌಲ್ಯದ ಮರಳನ್ನು ವಶಪಡಿಸಿಕೊಂಡ ಘಟನೆ ಜ.19ರಂದು ನಡೆದಿದೆ.

ಜ.19 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಸುದೆಮುಗೇರು ಎಂಬಲ್ಲಿ, ಸೋಮಾವತಿ ನದಿ ಕಿನಾರೆಯಿಂದ ಹಿಟಾಚಿ ಬಳಸಿ, ಮರಳು ಕಳವು ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರು ಮಾಡುತ್ತಿದ್ದಾಗ, ಮುರಳಿಧರ ನಾಯ್ಕ ಕೆ.ಜೆ , ಪಿಎಸ್ಐ (ಕಾ&ಸು) ಬೆಳ್ತಂಗಡಿ ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ್ದು, ಆರೋಪಿಗಳಾದ ಬಿ. ರಹೀಮ್, ನಾಸೀರುದ್ದೀನ್ @ ನಾಸಿರ್ , ಸಂಶುದ್ದೀನ್ ಮತ್ತು ಅಬ್ದುಲ್ ಮಜೀದ್ ಎಂಬವರುಗಳು ನದಿ ಕಿನಾರೆಗೆ ಜಾಲರಿ ಅಳವಡಿಸಿ, ಹಿಟಾಚಿ ಬಳಸಿ, ನಂಬ್ರ ಕೆಎ 12 ಬಿ 4805 ಟಿಪ್ಪರ್ ಲಾರಿಯಲ್ಲಿ ಚರಳು ಮಿಶ್ರಿತ ಮರಳು ಕಳ್ಳತನ ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರಿ ನಡೆಸುತ್ತಿದ್ದುದನ್ನು ಪತ್ತೆ ಮಾಡಿರುತ್ತಾರೆ. ಸ್ಥಳದಲ್ಲಿದ್ದ ಅಂದಾಜು ಒಟ್ಟು ರೂ 23,56,000/- ಮೌಲ್ಯದ ವಾಹನ ಹಾಗೂ ಅಂದಾಜು ರೂ 3,000/- ಮೌಲ್ಯದ ಮರಳನ್ನು ಸ್ವಾಧೀನಪಡಿಸಿ ಆರೋಪಿಗಳ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 04/2024 ಕಲಂ: 379 ಜೊತೆಗೆ 34 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya

ಕೊಕ್ಕಡ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರ ಹುಟ್ಟುಹಬ್ಬದ ಆಚರಣೆ: ಧನಸಹಾಯ ವಿತರಣೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya
error: Content is protected !!