22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

ಕೊಯ್ಯೂರು : ಇಲ್ಲಿಯ ಸುದೆಮುಗೇರು ಎಂಬಲ್ಲಿ, ಸೋಮಾವತಿ ನದಿ ಕಿನಾರೆಯಿಂದ ಹಿಟಾಚಿ ಬಳಸಿ, ಮರಳು ಕಳವು ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರು ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ಆರೋಪಿಗಳ ಸಹಿತ ಸ್ಥಳದಲ್ಲಿದ್ದ ಅಂದಾಜು ಒಟ್ಟು ರೂ 23,56,000/- ಮೌಲ್ಯದ ವಾಹನ ಹಾಗೂ ಅಂದಾಜು ರೂ 3,000/- ಮೌಲ್ಯದ ಮರಳನ್ನು ವಶಪಡಿಸಿಕೊಂಡ ಘಟನೆ ಜ.19ರಂದು ನಡೆದಿದೆ.

ಜ.19 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಸುದೆಮುಗೇರು ಎಂಬಲ್ಲಿ, ಸೋಮಾವತಿ ನದಿ ಕಿನಾರೆಯಿಂದ ಹಿಟಾಚಿ ಬಳಸಿ, ಮರಳು ಕಳವು ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರು ಮಾಡುತ್ತಿದ್ದಾಗ, ಮುರಳಿಧರ ನಾಯ್ಕ ಕೆ.ಜೆ , ಪಿಎಸ್ಐ (ಕಾ&ಸು) ಬೆಳ್ತಂಗಡಿ ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ್ದು, ಆರೋಪಿಗಳಾದ ಬಿ. ರಹೀಮ್, ನಾಸೀರುದ್ದೀನ್ @ ನಾಸಿರ್ , ಸಂಶುದ್ದೀನ್ ಮತ್ತು ಅಬ್ದುಲ್ ಮಜೀದ್ ಎಂಬವರುಗಳು ನದಿ ಕಿನಾರೆಗೆ ಜಾಲರಿ ಅಳವಡಿಸಿ, ಹಿಟಾಚಿ ಬಳಸಿ, ನಂಬ್ರ ಕೆಎ 12 ಬಿ 4805 ಟಿಪ್ಪರ್ ಲಾರಿಯಲ್ಲಿ ಚರಳು ಮಿಶ್ರಿತ ಮರಳು ಕಳ್ಳತನ ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರಿ ನಡೆಸುತ್ತಿದ್ದುದನ್ನು ಪತ್ತೆ ಮಾಡಿರುತ್ತಾರೆ. ಸ್ಥಳದಲ್ಲಿದ್ದ ಅಂದಾಜು ಒಟ್ಟು ರೂ 23,56,000/- ಮೌಲ್ಯದ ವಾಹನ ಹಾಗೂ ಅಂದಾಜು ರೂ 3,000/- ಮೌಲ್ಯದ ಮರಳನ್ನು ಸ್ವಾಧೀನಪಡಿಸಿ ಆರೋಪಿಗಳ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 04/2024 ಕಲಂ: 379 ಜೊತೆಗೆ 34 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಗುರುವಾಯನಕೆರೆ ದೈವಾರಾಧಕರ ಮಹಾ ಸಮಾವೇಶದಲ್ಲಿ ಎಕ್ಸೆಲ್ ಕಲಾ ವೈಭವ

Suddi Udaya

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

Suddi Udaya
error: Content is protected !!