September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

ಕೊಯ್ಯೂರು : ಇಲ್ಲಿಯ ಸುದೆಮುಗೇರು ಎಂಬಲ್ಲಿ, ಸೋಮಾವತಿ ನದಿ ಕಿನಾರೆಯಿಂದ ಹಿಟಾಚಿ ಬಳಸಿ, ಮರಳು ಕಳವು ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರು ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ಆರೋಪಿಗಳ ಸಹಿತ ಸ್ಥಳದಲ್ಲಿದ್ದ ಅಂದಾಜು ಒಟ್ಟು ರೂ 23,56,000/- ಮೌಲ್ಯದ ವಾಹನ ಹಾಗೂ ಅಂದಾಜು ರೂ 3,000/- ಮೌಲ್ಯದ ಮರಳನ್ನು ವಶಪಡಿಸಿಕೊಂಡ ಘಟನೆ ಜ.19ರಂದು ನಡೆದಿದೆ.

ಜ.19 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಸುದೆಮುಗೇರು ಎಂಬಲ್ಲಿ, ಸೋಮಾವತಿ ನದಿ ಕಿನಾರೆಯಿಂದ ಹಿಟಾಚಿ ಬಳಸಿ, ಮರಳು ಕಳವು ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರು ಮಾಡುತ್ತಿದ್ದಾಗ, ಮುರಳಿಧರ ನಾಯ್ಕ ಕೆ.ಜೆ , ಪಿಎಸ್ಐ (ಕಾ&ಸು) ಬೆಳ್ತಂಗಡಿ ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ್ದು, ಆರೋಪಿಗಳಾದ ಬಿ. ರಹೀಮ್, ನಾಸೀರುದ್ದೀನ್ @ ನಾಸಿರ್ , ಸಂಶುದ್ದೀನ್ ಮತ್ತು ಅಬ್ದುಲ್ ಮಜೀದ್ ಎಂಬವರುಗಳು ನದಿ ಕಿನಾರೆಗೆ ಜಾಲರಿ ಅಳವಡಿಸಿ, ಹಿಟಾಚಿ ಬಳಸಿ, ನಂಬ್ರ ಕೆಎ 12 ಬಿ 4805 ಟಿಪ್ಪರ್ ಲಾರಿಯಲ್ಲಿ ಚರಳು ಮಿಶ್ರಿತ ಮರಳು ಕಳ್ಳತನ ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರಿ ನಡೆಸುತ್ತಿದ್ದುದನ್ನು ಪತ್ತೆ ಮಾಡಿರುತ್ತಾರೆ. ಸ್ಥಳದಲ್ಲಿದ್ದ ಅಂದಾಜು ಒಟ್ಟು ರೂ 23,56,000/- ಮೌಲ್ಯದ ವಾಹನ ಹಾಗೂ ಅಂದಾಜು ರೂ 3,000/- ಮೌಲ್ಯದ ಮರಳನ್ನು ಸ್ವಾಧೀನಪಡಿಸಿ ಆರೋಪಿಗಳ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 04/2024 ಕಲಂ: 379 ಜೊತೆಗೆ 34 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ

Suddi Udaya

ಬೆಳ್ತಂಗಡಿ ನ.ಪಂ. ಮುಂಭಾಗ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya

ಎ.25: ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ- ರೂ.40 ಲಕ್ಷ ವೆಚ್ಚದಲ್ಲಿ ಅಚ್ಚಿನಡ್ಕ ಕೆಲ್ಲಗುತ್ತು ನಲ್ಲಿ ನಿರ್ಮಿಸಲಾದ ಸಂಘದ ನೂತನ ಕಟ್ಟಡ ‘ಪ್ರಬುದ್ಧ’ ಉದ್ಘಾಟನೆ

Suddi Udaya

ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿಗೆ ಅತ್ಯಧಿಕ ರ‍್ಯಾಂಕ್‌ಗಳು

Suddi Udaya

ಸೆ.3: ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಪಟ್ಟಾಭಿಷೇಕ ವರ್ಧಂತಿ

Suddi Udaya
error: Content is protected !!