26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

ಕೊಯ್ಯೂರು : ಇಲ್ಲಿಯ ಸುದೆಮುಗೇರು ಎಂಬಲ್ಲಿ, ಸೋಮಾವತಿ ನದಿ ಕಿನಾರೆಯಿಂದ ಹಿಟಾಚಿ ಬಳಸಿ, ಮರಳು ಕಳವು ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರು ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ಆರೋಪಿಗಳ ಸಹಿತ ಸ್ಥಳದಲ್ಲಿದ್ದ ಅಂದಾಜು ಒಟ್ಟು ರೂ 23,56,000/- ಮೌಲ್ಯದ ವಾಹನ ಹಾಗೂ ಅಂದಾಜು ರೂ 3,000/- ಮೌಲ್ಯದ ಮರಳನ್ನು ವಶಪಡಿಸಿಕೊಂಡ ಘಟನೆ ಜ.19ರಂದು ನಡೆದಿದೆ.

ಜ.19 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಸುದೆಮುಗೇರು ಎಂಬಲ್ಲಿ, ಸೋಮಾವತಿ ನದಿ ಕಿನಾರೆಯಿಂದ ಹಿಟಾಚಿ ಬಳಸಿ, ಮರಳು ಕಳವು ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರು ಮಾಡುತ್ತಿದ್ದಾಗ, ಮುರಳಿಧರ ನಾಯ್ಕ ಕೆ.ಜೆ , ಪಿಎಸ್ಐ (ಕಾ&ಸು) ಬೆಳ್ತಂಗಡಿ ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ್ದು, ಆರೋಪಿಗಳಾದ ಬಿ. ರಹೀಮ್, ನಾಸೀರುದ್ದೀನ್ @ ನಾಸಿರ್ , ಸಂಶುದ್ದೀನ್ ಮತ್ತು ಅಬ್ದುಲ್ ಮಜೀದ್ ಎಂಬವರುಗಳು ನದಿ ಕಿನಾರೆಗೆ ಜಾಲರಿ ಅಳವಡಿಸಿ, ಹಿಟಾಚಿ ಬಳಸಿ, ನಂಬ್ರ ಕೆಎ 12 ಬಿ 4805 ಟಿಪ್ಪರ್ ಲಾರಿಯಲ್ಲಿ ಚರಳು ಮಿಶ್ರಿತ ಮರಳು ಕಳ್ಳತನ ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರಿ ನಡೆಸುತ್ತಿದ್ದುದನ್ನು ಪತ್ತೆ ಮಾಡಿರುತ್ತಾರೆ. ಸ್ಥಳದಲ್ಲಿದ್ದ ಅಂದಾಜು ಒಟ್ಟು ರೂ 23,56,000/- ಮೌಲ್ಯದ ವಾಹನ ಹಾಗೂ ಅಂದಾಜು ರೂ 3,000/- ಮೌಲ್ಯದ ಮರಳನ್ನು ಸ್ವಾಧೀನಪಡಿಸಿ ಆರೋಪಿಗಳ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 04/2024 ಕಲಂ: 379 ಜೊತೆಗೆ 34 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ರೂ.3ಕೋಟಿ ಅನುದಾನ

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಕಣಿಯೂರು ದೀಪಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya
error: Content is protected !!