23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

ಕೊಯ್ಯೂರು : ಇಲ್ಲಿಯ ಸುದೆಮುಗೇರು ಎಂಬಲ್ಲಿ, ಸೋಮಾವತಿ ನದಿ ಕಿನಾರೆಯಿಂದ ಹಿಟಾಚಿ ಬಳಸಿ, ಮರಳು ಕಳವು ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರು ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ಆರೋಪಿಗಳ ಸಹಿತ ಸ್ಥಳದಲ್ಲಿದ್ದ ಅಂದಾಜು ಒಟ್ಟು ರೂ 23,56,000/- ಮೌಲ್ಯದ ವಾಹನ ಹಾಗೂ ಅಂದಾಜು ರೂ 3,000/- ಮೌಲ್ಯದ ಮರಳನ್ನು ವಶಪಡಿಸಿಕೊಂಡ ಘಟನೆ ಜ.19ರಂದು ನಡೆದಿದೆ.

ಜ.19 ರಂದು ಸಂಜೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಸುದೆಮುಗೇರು ಎಂಬಲ್ಲಿ, ಸೋಮಾವತಿ ನದಿ ಕಿನಾರೆಯಿಂದ ಹಿಟಾಚಿ ಬಳಸಿ, ಮರಳು ಕಳವು ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರು ಮಾಡುತ್ತಿದ್ದಾಗ, ಮುರಳಿಧರ ನಾಯ್ಕ ಕೆ.ಜೆ , ಪಿಎಸ್ಐ (ಕಾ&ಸು) ಬೆಳ್ತಂಗಡಿ ಪೊಲೀಸ್ ಠಾಣೆರವರು ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ್ದು, ಆರೋಪಿಗಳಾದ ಬಿ. ರಹೀಮ್, ನಾಸೀರುದ್ದೀನ್ @ ನಾಸಿರ್ , ಸಂಶುದ್ದೀನ್ ಮತ್ತು ಅಬ್ದುಲ್ ಮಜೀದ್ ಎಂಬವರುಗಳು ನದಿ ಕಿನಾರೆಗೆ ಜಾಲರಿ ಅಳವಡಿಸಿ, ಹಿಟಾಚಿ ಬಳಸಿ, ನಂಬ್ರ ಕೆಎ 12 ಬಿ 4805 ಟಿಪ್ಪರ್ ಲಾರಿಯಲ್ಲಿ ಚರಳು ಮಿಶ್ರಿತ ಮರಳು ಕಳ್ಳತನ ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರಿ ನಡೆಸುತ್ತಿದ್ದುದನ್ನು ಪತ್ತೆ ಮಾಡಿರುತ್ತಾರೆ. ಸ್ಥಳದಲ್ಲಿದ್ದ ಅಂದಾಜು ಒಟ್ಟು ರೂ 23,56,000/- ಮೌಲ್ಯದ ವಾಹನ ಹಾಗೂ ಅಂದಾಜು ರೂ 3,000/- ಮೌಲ್ಯದ ಮರಳನ್ನು ಸ್ವಾಧೀನಪಡಿಸಿ ಆರೋಪಿಗಳ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 04/2024 ಕಲಂ: 379 ಜೊತೆಗೆ 34 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಅಕ್ರಮ-ಸಕ್ರಮ ಹಾಗೂ 94ಸಿ ಅರ್ಜಿಗಳನ್ನು ತ್ವರಿತ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ನೀಡಿ : ಎಸ್‌ಡಿಪಿಐ ಆಗ್ರಹ”

Suddi Udaya
error: Content is protected !!