27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

ನಾಲ್ಕೂರು: ಇಲ್ಲಿಯ ಹುಂಬೆಜೆ ಪಲ್ಕೆಯಲ್ಲಿ ನಡೆಯುವ ವರ್ಷಂಪ್ರತಿ ಜರಗುವ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ದೈವಸ್ಥಾನ, ಬೋವಾಡಿಯಲ್ಲಿ ನಡೆಯುವ ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವವು ಫೆ.7 ಮತ್ತು 8ರಂದು ಜರಗಲಿರುವುದು.

ಫೆ.7ರಂದು ಬೆಳಿಗ್ಗೆ ಹುಂಬೆಜೆ ಪಲ್ಕೆಯಲ್ಲಿ ಸಾರಿ ಹಾಕುವುದು ಮತ್ತು ಕಬೆ ಮುಹೂರ್ತ, ಚೆಂಡು ಇತ್ಯಾದಿ, ಸಂಜೆ ನಾಲ್ಕೂರುಗುತ್ತು ಮನೆಯಿಂದ ಭಂಡಾರ ಹೊರಡುವುದು. ರಾತ್ರಿ ಹುಂಬೆಜೆಪಲ್ಕೆಯಲ್ಲಿ ಕಲಶ ಶುದ್ಧಿ, ಸಾರ್ವಜನಿಕ ಅನ್ನಸಂತರ್ಪಣೆ, ಮಹಮ್ಮಾಯಿ ಪ್ರತಿಷ್ಠೆ ಹಾಗೂ ಶ್ರೀ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ, ಕಲ್ಲುರ್ಟಿ, ಕಲ್ಕುಡ ದೈವಗಳ ನೇಮ ನಡೆಯಲಿರುವುದು.

ಫೆ.8ರಂದು ಸಂಜೆ ನಾಲ್ಕೂರುಗುತ್ತು ಮನೆಯಿಂದ ಭಂಡಾರ ಹೊರಡುವುದು. ಬೋವಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಪಂಚ ವರ್ಣ, ಸಾರ್ವಜನಿಕ ಅನ್ನಸಂತರ್ಪಣೆ, ಶ್ರೀ ಕೊಡಮಣಿತ್ತಾಯ, ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ ಜರುಗಲಿರುವುದು.

Related posts

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಧರ್ಮಸ್ಥಳಕ್ಕೆ ಭೇಟಿ ನೀಡಿದ ರಶ್ಯಾದ ಪ್ರವಾಸಿಗರು

Suddi Udaya
error: Content is protected !!