25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

ನಾಲ್ಕೂರು: ಇಲ್ಲಿಯ ಹುಂಬೆಜೆ ಪಲ್ಕೆಯಲ್ಲಿ ನಡೆಯುವ ವರ್ಷಂಪ್ರತಿ ಜರಗುವ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ದೈವಸ್ಥಾನ, ಬೋವಾಡಿಯಲ್ಲಿ ನಡೆಯುವ ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವವು ಫೆ.7 ಮತ್ತು 8ರಂದು ಜರಗಲಿರುವುದು.

ಫೆ.7ರಂದು ಬೆಳಿಗ್ಗೆ ಹುಂಬೆಜೆ ಪಲ್ಕೆಯಲ್ಲಿ ಸಾರಿ ಹಾಕುವುದು ಮತ್ತು ಕಬೆ ಮುಹೂರ್ತ, ಚೆಂಡು ಇತ್ಯಾದಿ, ಸಂಜೆ ನಾಲ್ಕೂರುಗುತ್ತು ಮನೆಯಿಂದ ಭಂಡಾರ ಹೊರಡುವುದು. ರಾತ್ರಿ ಹುಂಬೆಜೆಪಲ್ಕೆಯಲ್ಲಿ ಕಲಶ ಶುದ್ಧಿ, ಸಾರ್ವಜನಿಕ ಅನ್ನಸಂತರ್ಪಣೆ, ಮಹಮ್ಮಾಯಿ ಪ್ರತಿಷ್ಠೆ ಹಾಗೂ ಶ್ರೀ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ, ಕಲ್ಲುರ್ಟಿ, ಕಲ್ಕುಡ ದೈವಗಳ ನೇಮ ನಡೆಯಲಿರುವುದು.

ಫೆ.8ರಂದು ಸಂಜೆ ನಾಲ್ಕೂರುಗುತ್ತು ಮನೆಯಿಂದ ಭಂಡಾರ ಹೊರಡುವುದು. ಬೋವಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಪಂಚ ವರ್ಣ, ಸಾರ್ವಜನಿಕ ಅನ್ನಸಂತರ್ಪಣೆ, ಶ್ರೀ ಕೊಡಮಣಿತ್ತಾಯ, ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ ಜರುಗಲಿರುವುದು.

Related posts

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ

Suddi Udaya

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya
error: Content is protected !!