September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

ನಾಲ್ಕೂರು: ಇಲ್ಲಿಯ ಹುಂಬೆಜೆ ಪಲ್ಕೆಯಲ್ಲಿ ನಡೆಯುವ ವರ್ಷಂಪ್ರತಿ ಜರಗುವ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ದೈವಸ್ಥಾನ, ಬೋವಾಡಿಯಲ್ಲಿ ನಡೆಯುವ ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವವು ಫೆ.7 ಮತ್ತು 8ರಂದು ಜರಗಲಿರುವುದು.

ಫೆ.7ರಂದು ಬೆಳಿಗ್ಗೆ ಹುಂಬೆಜೆ ಪಲ್ಕೆಯಲ್ಲಿ ಸಾರಿ ಹಾಕುವುದು ಮತ್ತು ಕಬೆ ಮುಹೂರ್ತ, ಚೆಂಡು ಇತ್ಯಾದಿ, ಸಂಜೆ ನಾಲ್ಕೂರುಗುತ್ತು ಮನೆಯಿಂದ ಭಂಡಾರ ಹೊರಡುವುದು. ರಾತ್ರಿ ಹುಂಬೆಜೆಪಲ್ಕೆಯಲ್ಲಿ ಕಲಶ ಶುದ್ಧಿ, ಸಾರ್ವಜನಿಕ ಅನ್ನಸಂತರ್ಪಣೆ, ಮಹಮ್ಮಾಯಿ ಪ್ರತಿಷ್ಠೆ ಹಾಗೂ ಶ್ರೀ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ, ಕಲ್ಲುರ್ಟಿ, ಕಲ್ಕುಡ ದೈವಗಳ ನೇಮ ನಡೆಯಲಿರುವುದು.

ಫೆ.8ರಂದು ಸಂಜೆ ನಾಲ್ಕೂರುಗುತ್ತು ಮನೆಯಿಂದ ಭಂಡಾರ ಹೊರಡುವುದು. ಬೋವಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಪಂಚ ವರ್ಣ, ಸಾರ್ವಜನಿಕ ಅನ್ನಸಂತರ್ಪಣೆ, ಶ್ರೀ ಕೊಡಮಣಿತ್ತಾಯ, ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ ಜರುಗಲಿರುವುದು.

Related posts

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಕಳೆಂಜ: ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

Suddi Udaya

ಪ್ರೊ. ಮಧೂರು ಮೋಹನ ಕಲ್ಲೂರಾಯರಿಗೆ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya
error: Content is protected !!