ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬಂಟ್ವಾಳದ ಸ್ಪರ್ಶ ಕಲಾಮಂದಿರದಲ್ಲಿ ನಡೆದ ಎರಡನೇ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಪೆರಿಂಜೆ ಇಲ್ಲಿನ ವಿದ್ಯಾರ್ಥಿಗಳಾದ ಸೂರ್ಯ (8ನೇ ತರಗತಿ) ಪ್ರಥಮ ಸ್ಥಾನ ಹಾಗೂ ಹರ್ಷ (8ನೇ ತರಗತಿ), ಹರೀಶ (8ನೇ ತರಗತಿ) ಮತ್ತು ದೀಕ್ಷಿತ್ (9ನೇ ತರಗತಿ) ದ್ವಿತೀಯ ಬಹುಮಾನವನ್ನು ಕಟಾ ಮತ್ತು ಕುಮಿಟೆ ಎರಡೂ ವಿಭಾಗಗಳಲ್ಲಿ ಪಡೆದಿರುತ್ತಾರೆ.

ವಿದ್ಯಾರ್ಥಿಗಳಿಗೆ ಶಾಲೆಯ ಹಿರಿಯ ವಿದ್ಯಾರ್ಥಿ ಕಿಶೋರ್ ತರಬೇತಿ ನೀಡಿದ್ದರು.

Leave a Comment

error: Content is protected !!