37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

ಬೆಳ್ತಂಗಡಿ: ತೆಗೆದುಕೊಂಡ ತನ್ನ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಕೇಳಿದ ಮಹಿಳೆಗೆ ವ್ಯಕ್ತಿಯೋರ್ವ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಉರುಡಾಟ ನಡೆಸಿ ಮಾನಕ್ಕೆ ಕುಂದುಂಟು ಮಾಡಿ ಜೀವ ಬೆದರಿಕೆ ಒಡ್ಡಿದ ಘಟನೆ ಜ.19ರಂದು ನಡೆದಿದೆ.

ಮೂಡುಬಿದಿರೆ ಮಹಾವೀರ ಕಾಲೇಜ್ ಬಳಿ,ಸುವರ್ಣ ನಗರ, ನಿವಾಸಿ  ಶ್ರೀಮತಿ ಜುಬೈದಾ ತಾಜುದ್ದೀನ್ ಶೇಕ್ ಎಂಬವರು ವೇಣೂರು ಪೊಲೀಸರಿಗೆ ನೀಡಿದ ದೂರಿನಂತೆ  ಜ.19ರಂದು ಪೆರಾಡಿ ಗ್ರಾಮದ ದುಗ್ಗನ ಬೆಟ್ಟು ಮನೆ ನಿವಾಸಿ ಸಲ್ಮಾನ್ ಫಾರೀಸ್  ಎಂಬಾತನು ಕಾಣಸಿಕ್ಕಿದಾಗ ಆತನಲ್ಲಿ ನನ್ನ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಹೇಳಿದಾಗ ಆತ ಏಕಾಏಕಿ ಕೋಪಗೊಂಡು ನಿನಗೆ ಚಿನ್ನ ವಾಪಾಸು ಕೊಡುವುದಿಲ್ಲ, ನೀನು ಏನು ಮಾಡುತ್ತಿಯಾ ಮಾಡಿಕೋ ಎಂದು ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಕೆನ್ನೆಗೆ ಹೊಡೆದು ಕುತ್ತಿಗೆಯನ್ನು ಹಿಚುಕಿ ಉರುಡಾಟ ನಡೆಸಿ ಮಾನಕ್ಕೆ ಕುಂದುಂಟು ಮಾಡಿ ಜೀವ ಬೆದರಿಕೆ ಒಡ್ಡಿರುತ್ತಾನೆ ಎಂದು ಆರೋಪಿಸಿದ್ದಾರೆ. ವೇಣೂರು ಪೊಲೀಸ್ ಠಾಣಾ ಅ.ಕ್ರ: 08/2024 ಕಲಂ: 504 ,323, 354, 506 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ , ಕಬ್ಸ್ ಮತ್ತು ಬುಲ್ ಬುಲ್ಬಸ್ ಹಾಗೂ ಬನ್ನಿಸ್ ವತಿಯಿಂದ ಧ್ವಜ ದಿನಾಚರಣೆ

Suddi Udaya

ಕೃಷಿಕರ ವಿರೋಧಿ, ಪರಿಶಿಷ್ಟ ವರ್ಗ ಕಡೆಗಣಿಸಿದ ಬಜೆಟ್ – ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

Suddi Udaya

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

Suddi Udaya
error: Content is protected !!