24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

ಬೆಳ್ತಂಗಡಿ: ತೆಗೆದುಕೊಂಡ ತನ್ನ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಕೇಳಿದ ಮಹಿಳೆಗೆ ವ್ಯಕ್ತಿಯೋರ್ವ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಉರುಡಾಟ ನಡೆಸಿ ಮಾನಕ್ಕೆ ಕುಂದುಂಟು ಮಾಡಿ ಜೀವ ಬೆದರಿಕೆ ಒಡ್ಡಿದ ಘಟನೆ ಜ.19ರಂದು ನಡೆದಿದೆ.

ಮೂಡುಬಿದಿರೆ ಮಹಾವೀರ ಕಾಲೇಜ್ ಬಳಿ,ಸುವರ್ಣ ನಗರ, ನಿವಾಸಿ  ಶ್ರೀಮತಿ ಜುಬೈದಾ ತಾಜುದ್ದೀನ್ ಶೇಕ್ ಎಂಬವರು ವೇಣೂರು ಪೊಲೀಸರಿಗೆ ನೀಡಿದ ದೂರಿನಂತೆ  ಜ.19ರಂದು ಪೆರಾಡಿ ಗ್ರಾಮದ ದುಗ್ಗನ ಬೆಟ್ಟು ಮನೆ ನಿವಾಸಿ ಸಲ್ಮಾನ್ ಫಾರೀಸ್  ಎಂಬಾತನು ಕಾಣಸಿಕ್ಕಿದಾಗ ಆತನಲ್ಲಿ ನನ್ನ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಹೇಳಿದಾಗ ಆತ ಏಕಾಏಕಿ ಕೋಪಗೊಂಡು ನಿನಗೆ ಚಿನ್ನ ವಾಪಾಸು ಕೊಡುವುದಿಲ್ಲ, ನೀನು ಏನು ಮಾಡುತ್ತಿಯಾ ಮಾಡಿಕೋ ಎಂದು ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಕೆನ್ನೆಗೆ ಹೊಡೆದು ಕುತ್ತಿಗೆಯನ್ನು ಹಿಚುಕಿ ಉರುಡಾಟ ನಡೆಸಿ ಮಾನಕ್ಕೆ ಕುಂದುಂಟು ಮಾಡಿ ಜೀವ ಬೆದರಿಕೆ ಒಡ್ಡಿರುತ್ತಾನೆ ಎಂದು ಆರೋಪಿಸಿದ್ದಾರೆ. ವೇಣೂರು ಪೊಲೀಸ್ ಠಾಣಾ ಅ.ಕ್ರ: 08/2024 ಕಲಂ: 504 ,323, 354, 506 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

Related posts

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ

Suddi Udaya

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya
error: Content is protected !!