September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

ಬೆಳ್ತಂಗಡಿ: ತೆಗೆದುಕೊಂಡ ತನ್ನ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಕೇಳಿದ ಮಹಿಳೆಗೆ ವ್ಯಕ್ತಿಯೋರ್ವ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಉರುಡಾಟ ನಡೆಸಿ ಮಾನಕ್ಕೆ ಕುಂದುಂಟು ಮಾಡಿ ಜೀವ ಬೆದರಿಕೆ ಒಡ್ಡಿದ ಘಟನೆ ಜ.19ರಂದು ನಡೆದಿದೆ.

ಮೂಡುಬಿದಿರೆ ಮಹಾವೀರ ಕಾಲೇಜ್ ಬಳಿ,ಸುವರ್ಣ ನಗರ, ನಿವಾಸಿ  ಶ್ರೀಮತಿ ಜುಬೈದಾ ತಾಜುದ್ದೀನ್ ಶೇಕ್ ಎಂಬವರು ವೇಣೂರು ಪೊಲೀಸರಿಗೆ ನೀಡಿದ ದೂರಿನಂತೆ  ಜ.19ರಂದು ಪೆರಾಡಿ ಗ್ರಾಮದ ದುಗ್ಗನ ಬೆಟ್ಟು ಮನೆ ನಿವಾಸಿ ಸಲ್ಮಾನ್ ಫಾರೀಸ್  ಎಂಬಾತನು ಕಾಣಸಿಕ್ಕಿದಾಗ ಆತನಲ್ಲಿ ನನ್ನ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಹೇಳಿದಾಗ ಆತ ಏಕಾಏಕಿ ಕೋಪಗೊಂಡು ನಿನಗೆ ಚಿನ್ನ ವಾಪಾಸು ಕೊಡುವುದಿಲ್ಲ, ನೀನು ಏನು ಮಾಡುತ್ತಿಯಾ ಮಾಡಿಕೋ ಎಂದು ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಕೆನ್ನೆಗೆ ಹೊಡೆದು ಕುತ್ತಿಗೆಯನ್ನು ಹಿಚುಕಿ ಉರುಡಾಟ ನಡೆಸಿ ಮಾನಕ್ಕೆ ಕುಂದುಂಟು ಮಾಡಿ ಜೀವ ಬೆದರಿಕೆ ಒಡ್ಡಿರುತ್ತಾನೆ ಎಂದು ಆರೋಪಿಸಿದ್ದಾರೆ. ವೇಣೂರು ಪೊಲೀಸ್ ಠಾಣಾ ಅ.ಕ್ರ: 08/2024 ಕಲಂ: 504 ,323, 354, 506 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

Related posts

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

Suddi Udaya

ಸಿಎಎ ಕಾಯಿದೆ ಅನುಷ್ಠಾನ: ಬಿಜೆಪಿ ಮಂಡಲ ಮತ್ತು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya

ಬೆಳ್ತಂಗಡಿ ವಿ.ಹಿಂ.ಪ ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಂದರ್ಭ ಗೋ ಹತ್ಯೆಯನ್ನು ಖಂಡಿಸಿ ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ

Suddi Udaya
error: Content is protected !!