23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

ಬೆಳ್ತಂಗಡಿ: ತೆಗೆದುಕೊಂಡ ತನ್ನ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಕೇಳಿದ ಮಹಿಳೆಗೆ ವ್ಯಕ್ತಿಯೋರ್ವ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಉರುಡಾಟ ನಡೆಸಿ ಮಾನಕ್ಕೆ ಕುಂದುಂಟು ಮಾಡಿ ಜೀವ ಬೆದರಿಕೆ ಒಡ್ಡಿದ ಘಟನೆ ಜ.19ರಂದು ನಡೆದಿದೆ.

ಮೂಡುಬಿದಿರೆ ಮಹಾವೀರ ಕಾಲೇಜ್ ಬಳಿ,ಸುವರ್ಣ ನಗರ, ನಿವಾಸಿ  ಶ್ರೀಮತಿ ಜುಬೈದಾ ತಾಜುದ್ದೀನ್ ಶೇಕ್ ಎಂಬವರು ವೇಣೂರು ಪೊಲೀಸರಿಗೆ ನೀಡಿದ ದೂರಿನಂತೆ  ಜ.19ರಂದು ಪೆರಾಡಿ ಗ್ರಾಮದ ದುಗ್ಗನ ಬೆಟ್ಟು ಮನೆ ನಿವಾಸಿ ಸಲ್ಮಾನ್ ಫಾರೀಸ್  ಎಂಬಾತನು ಕಾಣಸಿಕ್ಕಿದಾಗ ಆತನಲ್ಲಿ ನನ್ನ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಹೇಳಿದಾಗ ಆತ ಏಕಾಏಕಿ ಕೋಪಗೊಂಡು ನಿನಗೆ ಚಿನ್ನ ವಾಪಾಸು ಕೊಡುವುದಿಲ್ಲ, ನೀನು ಏನು ಮಾಡುತ್ತಿಯಾ ಮಾಡಿಕೋ ಎಂದು ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಕೆನ್ನೆಗೆ ಹೊಡೆದು ಕುತ್ತಿಗೆಯನ್ನು ಹಿಚುಕಿ ಉರುಡಾಟ ನಡೆಸಿ ಮಾನಕ್ಕೆ ಕುಂದುಂಟು ಮಾಡಿ ಜೀವ ಬೆದರಿಕೆ ಒಡ್ಡಿರುತ್ತಾನೆ ಎಂದು ಆರೋಪಿಸಿದ್ದಾರೆ. ವೇಣೂರು ಪೊಲೀಸ್ ಠಾಣಾ ಅ.ಕ್ರ: 08/2024 ಕಲಂ: 504 ,323, 354, 506 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

Related posts

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!