22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

ಬೆಳ್ತಂಗಡಿ: ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ರೂ. 2.40 ಲಕ್ಷ ವೆಚ್ಚದಲ್ಲಿ ಕಲ್ಪಿಸಲಾದ ಸ್ಮಾರ್ಟ್‌ ಕ್ಲಾಸ್‌ (ಡಿಜಿಟಲ್‌ ತರಗತಿ) ಸೌಲಭ್ಯವನ್ನು ಗುರುವಾರ ಲೋಕಾರ್ಪಣೆ ಮಾಡಲಾಯಿತು. ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ ನಿಧಿ ಯೋಜನೆಯಡಿ ಐಇಇಇ ಅಡ್ವಾನ್ಸಿಂಗ್‌ ಟೆಕ್ನಾಲಜಿ ಫಾರ್‌ ಹ್ಯೂಮಾನಿಟಿ ಸಂಸ್ಥೆಯಿಂದ ನಿರ್ಮಿಸಲಾದ ಸ್ಮಾರ್ಟ್‌ ಕ್ಲಾಸ್‌ ಅನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಚಂದ್ರಶೇಖರ್‌ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು, ಐಇಇಇ ಸಂಸ್ಥೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಹಾಗೂ ಬೆಳ್ತಂಗಡಿ ತಾಲ್ಲೂಕಿನ ಒಂದು ಶಾಲೆಯನ್ನು ಸ್ಮಾರ್ಟ್‌ ಕ್ಲಾಸ್‌ ಯೋಜನೆಗೆ ಆಯ್ಕೆ ಮಾಡಿ, ಸೌಲಭ್ಯ ಕಲ್ಪಿಸಿದೆ. ಡಿಜಿಟಲ್‌ ತರಗತಿಯ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಇದು ಪೂರಕವಾಗಿದೆ. ಹಳ್ಳಿಯ ವಿದ್ಯಾರ್ಥಿಗಳು ಸಹ ಉತ್ತಮ ಅಂಕ ಪಡೆದು ಸಾಧನೆಯತ್ತ ದೃಢ ಹೆಜ್ಜೆ ಇಡಲು ಈ ಸೌಲಭ್ಯ ಕಲ್ಪಿಸಲಾಗಿದೆ. ಪೂರ್ಣಪ್ರಮಾಣದಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.

ಫೆ.17ರಂದು ಶಾಲಾ ಕಟ್ಟಡ ಲೋಕಾರ್ಪಣೆ: ಕೂಕ್ರಬೆಟ್ಟು ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್‌ ಮಾತನಾಡಿ, 2019ರಲ್ಲಿ 16 ಮಕ್ಕಳಿದ್ದು, ಮುಚ್ಚುವ ಹಂತದಲ್ಲಿದ್ದ ನಮ್ಮ ಶಾಲೆಯನ್ನು ಪ್ರಕಾಶ್‌ ಅಂಚನ್‌ ಸಾರಥ್ಯದ ದಡ್ಡಲಕಾಡು ಶ್ರೀ ದುರ್ಗಾ ಚಾರಿಟಬಲ್‌ ಟ್ರಸ್ಟ್‌ ದತ್ತು ಪಡೆದಿದೆ. ಎಲ್ಲರ ಪ್ರಯತ್ನದ ಫಲವಾಗಿ ಇಂದು 180ಕ್ಕೂ ಅಧಿಕ ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಶಾಸಕ ಹರೀಶ್‌ ಪೂಂಜ ಅವರ ವಿಶೇಷ ಮುತುವರ್ಜಿಯಿಂದ ಶಾಲೆಗೆ ಸುಮಾರು 1 ಕೋಟಿ ರೂಪಾಯಿಯ ಸುಸಜ್ಜಿತ ಕಟ್ಟಡ ದೊರಕಿದ್ದು, ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಫೆಬ್ರುವರಿ 17ರಂದು ಈ ಸುಸಜ್ಜಿತ ಕಟ್ಟಡದ ಲೋಕಾರ್ಪಣೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಶಾಲೆಗೆ ಸ್ಮಾರ್ಟ್‌ ಕ್ಲಾಸ್‌ ಸೌಲಭ್ಯ ದೊರಕಿರುವುದು ಖುಷಿ ತಂದಿದೆ ಎಂದು ಹೇಳಿದರು.ಮರೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರತ್ನಾಕರ ಬುಣ್ಣಾನ್‌ ಅಧ್ಯಕ್ಷತೆ ವಹಿಸಿ, ಕೂಕ್ರಬೆಟ್ಟು ಶಾಲೆಯು ಮಾದರಿಯಾಗಿ ಬೆಳೆಯುತ್ತಿದ್ದು, ಇದರ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಹೇಳಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಯಶೋಧರ ಬಂಗೇರ, ಉಪಾಧ್ಯಕ್ಷ ಯೋಗೇಂದ್ರ ಆಚಾರ್ಯ, ಗ್ರಾಮ ಪಂಚಾಯಿತಿ ಸದಸ್ಯ ಅಶೋಕ್‌ ಪೂಜಾರಿ, ಐಇಇಇ ಸಂಸ್ಥೆಯ ಪಾಲುದಾರ ಅಶೋಕ್‌, ಸಹ ಸಂಯೋಜಕ ಸ್ವರಾಜ್‌, ಪೋಷಕರಾದ ಸುರೇಂದ್ರ ಸಾಲ್ಯಾನ್‌, ತಾಯಂದಿರ ಸಮಿತಿ ಅಧ್ಯಕ್ಷೆ ಸುರೇಖಾ ಹೆಗ್ಡೆ ಇದ್ದರು.ಶಾಲಾ ಮುಖ್ಯ ಶಿಕ್ಷಕಿ ಸುಫಲಾ ಸ್ವಾಗತಿಸಿದರು. ಸಹ ಶಿಕ್ಷಕಿ ಶುಭಶ್ರೀ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಸುಚಿತ್ರ ಧನ್ಯವಾದವಿತ್ತರು. ವಿವಿಧ ಸಮಿತಿಗಳ ಪದಾಧಿಕಾರಿಗಳು, ಶಿಕ್ಷಕರು, ಮಕ್ಕಳ ಪೋಷಕರು, ವಿದ್ಯಾರ್ಥಿಗಳು ಇದ್ದರು.

Related posts

ಕುವೆಟ್ಟು: ನೂರಲ್ ಹುದಾ‌ ಜುಮಾ ಮಸೀದಿ ಮದ್ದಡ್ಕ ವತಿಯಿಂದ ಮಾದಕ ದ್ರವ್ಯ‌ ಮುಕ್ತ‌ ಜನಜಾಗೃತಿ ಜಾಥಾ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ರಾಜಾಜಿನಗರದ ಶಾಸಕ ಸುರೇಶ ಕುಮಾರ್

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರ್ಜುನ್ ಜನ್ಯ ದಂಪತಿ ಭೇಟಿ

Suddi Udaya

ಮದ್ದಡ್ಕ ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!