25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಬ್ರಹ್ಮಕಲಶ: ಚಪ್ಪರ ಮುಹೂರ್ತ

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದಲ್ಲಿ ಫೆ.17ರಿಂದ 26ರ ವರೆಗೆ ಪ್ರತಿಷ್ಟ ಅಷ್ಟಬಂಧ ಬ್ರಹ್ಮಕಲಶ ಜರುಗಲಿದ್ದು, ಆ ಪ್ರಯುಕ್ತ ಚಪ್ಪರ ಮುಹೂರ್ತವು ಫೆ.21ರಂದು ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಜರುಗಿತು.

ಈ ಸಂಧರ್ಭ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಿಗೆ ಸಮರ್ಪಿಸಲಾಯಿತು.ನಂತರ ವಿವಿಧ ಸಮಿತಿಗಳ ಸಭೆ ಜರುಗಿತು.

ಪ್ರಹ್ಲಾದ್ ತಾಮ್ಹಣ್ಕರ್, ಬೆಂಗಳೂರು ಮಾತನಾಡಿ ಜೀರ್ಣೋದ್ದಾರ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀರಂಗ ದಾಮ್ಲೆ, ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ, ಜಯರಾಮ ನೆಲ್ಲಿತ್ತಾಯ ಶಿಶಿಲ, ವಾಮನ ತಾಮ್ಹಣ್ಕರ್, ಅರಸಿನಮಕ್ಕಿ, ಸುಧೀರ್ ಕುಮಾರ್ ಎಂ.ಎಸ್., ಮುರಳೀಧರ ಶೆಟ್ಟಿಗಾರ್,ಅರವಿಂದ ಕುಡ್ವ, ಕೇಶವ ರಾವ್ ನೆಕ್ಕಿಲು, ಮಂಜುಳಾ ಕಾರಂತ್, ಶಕುಂತಳಾ ಆಚಾರ್ಯ, ಸರೋಜಿನಿ ನಾಯ್ಕ್, ಶ್ರೀಕರ ರಾವ್, ದಿನಕರ್ ಕುರುಪ್ ಉಪಸ್ಥಿತರಿದ್ದರು.ವಿವಿಧ ಸಮಿತಿಗಳ ಸಂಚಾಲಕರು ತಮ್ಮ ಸಮಿತಿಗಳಿಂದ ಆದ ಕೆಲಸಗಳ ಮಾಹಿತಿ ನೀಡಿದರು.

ಪ್ರಕಾಶ್ ಪಿಲಿಕ್ಕಬೆ, ಜಯರಾಮ ನೆಲ್ಲಿತ್ತಾಯ, ಶ್ರೀರಂಗ ದಾಮ್ಲೆ, ವಾಮನ ತಾಮ್ಹಣ್ಕರ್, ಸುಧೀರ್ ಕುಮಾರ್ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.

ಪ್ರಾರ್ಥನಾ ಮತ್ತು ತಂಡದವರು ಪ್ರಾರ್ಥಿಸಿದರು. ಪ್ರಕಾಶ್ ಪಿಲಿಕ್ಕಬೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವೃಶಾಂಕ್ ಖಾಡಿಲ್ಕರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಮುಂಡಾಜೆ‌: ಮಸ್ಲಕ್ ನವೀಕೃತ ಮದರಸ ಉದ್ಘಾಟನೆ: ಹಜ್ಜ್ ಯಾತ್ರಿ ಕಾಜೂರು ತಂಙಳ್ ರಿಗೆ ಬೀಳ್ಕೊಡುಗೆ

Suddi Udaya

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಉಜಿರೆ :ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಪೋಷಕರ ಸಭೆ ‘

Suddi Udaya

ಮೇ 21: ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಮಾನ್ಸೂನ್ ಸೇಲ್ : ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್

Suddi Udaya

ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!