ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

ಧರ್ಮಸ್ಥಳ: ಮರ್ಯಾದಾ ಪುರುಷೋತ್ತಮನಾಗಿ ಮೆರೆದ ಶ್ರೀರಾಮ ಪಿತೃವಾಕ್ಯ ಪರಿಪಾಲನೆ, ಕುಟುಂಬದವರ ಮೇಲಿನ ಪ್ರೀತಿ-ವಿಶ್ವಾಸ, ಸತ್ಯ-ಧರ್ಮ, ನ್ಯಾಯ-ನೀತಿ ಪರಿಪಾಲನೆ, ತಾಳ್ಮೆ, ದೃಢಸಂಕಲ್ಪ ಮೊದಲಾದ ಮಾನವೀಯಮೌಲ್ಯ ಹಾಗೂ ನೈತಿಕಗುಣಗಳಿಂದಾಗಿ ಸಾವಿರಾರು ವರ್ಷಗಳಿಂದ ಲಕ್ಷಾಂತರ ಜನರ ಪ್ರತಿ ಮನದಲ್ಲಿಯೂ, ಮನೆಯಲ್ಲಿಯೂ ಸ್ಥಿರವಾಗಿ ನೆಲೆಸಿದ್ದಾನೆ. ರಾಮನ ಹೆಸರು ನಮ್ಮ ಉಸಿರಾಗಬೇಕು. ಎಲ್ಲರೂ ರಾಮನಾಗಲು ಅಸಾಧ್ಯ. ಆದರೆ ರಾಮನ ಆದರ್ಶ ಗುಣಗಳನ್ನಾದರೂ ಪಾಲಿಸಿ ರಾಮರಾಜ್ಯದ ಕನಸು ನನಸಾಗಬೇಕು ಎಂದು ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು.

ಅವರು ಧರ್ಮಸ್ಥಳದಲ್ಲಿ ಜ.22ರಂದು ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಿ ಮಾತನಾಡಿದರು.

ರಾಮನನ್ನು ಹಲವರು ದೇವರಾಗಿ ಆರಾಧಿಸಿದರೆ ಅನೇಕ ಮಂದಿ ಆತನ ಆದರ್ಶ, ಮಾನವೀಯ ಗುಣಗಳಿಗಾಗಿ ಗೌರವಿಸಿ ಅನುಸರಿಸುತ್ತಾರೆ. ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣಪ್ರತಿಷ್ಠೆಯೊಂದಿಗೆ ಅದು ಧರ್ಮಸ್ಥಳದಂತೆ ಸರ್ವಧರ್ಮೀಯರ ಶ್ರದ್ಧಾ-ಭಕ್ತಿಯ ಕೇಂದ್ರವಾಗಿ ಬೆಳೆಯಲಿದೆ, ಬೆಳಗಲಿದೆ. ಅಯೋಧ್ಯೆಯೂ ಹಲವು ಮಂದಿ ತೀರ್ಥಂಕರರ ಜನ್ಮಸ್ಥಳವಾಗಿದ್ದು ಜೈನರಿಗೂ ಪವಿತ್ರ ತೀರ್ಥಕ್ಷೇತ್ರವಾಗಿದೆ ಎಂದು ಅವರು ಹೇಳಿದರು.

ಸಾಹಿತಿಗಳು, ಕವಿಗಳು, ರಾಮಾಯಣ ಗ್ರಂಥ ರಚನೆ ಮೂಲಕ ಪದ್ಯ, ನಾಟಕ, ಹರಿಕಥೆ, ಯಕ್ಷಗಾನ ಮೂಲಕ ರಾಮನ ಜೀವನ-ಸಾಧನೆ ಚಿತ್ರಿಸಿದ್ದಾರೆ. ವೈವಿಧ್ಯಮಯ ರಾಮಾಯಣ ಕೃತಿಗಳು ಪ್ರಕಟವಾಗಿವೆ. ಟಿ.ವಿ.ಯಲ್ಲಿ ರಮಾನಂದ ಸಾಗರರ ನೇತೃತ್ವದಲ್ಲಿ ಪ್ರಸಾರವಾದ ರಾಮಾಯಣ ಕೋಟ್ಯಾಂತರ ಜನರ ಮುಕ್ತ ಪ್ರಶಂಸೆಗೆ ಪಾತ್ರವಾಗಿದೆ. ಮಾನಸಿಕ ಸ್ಥಿರತೆ ಹಾಗೂ ಮಾನವೀಯ ಮೌಲ್ಯಗಳಿಗಾಗಿ ರಾಮ ಕೋಟ್ಯಾಂತರ ಜನರ ಮನದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ದೃಢಸಂಕಲ್ಪ ಹಾಗೂ ಲಕ್ಷಾಂತರ ಭಕ್ತರ ಕಠಿಣ ವ್ರತ-ನಿಯಮಗಳ ಪಾಲನೆ, ಶ್ರದ್ಧಾಭಕ್ತಿಯಿಂದ ರಾಮಮಂದಿರದ ಕನಸು ನನಸಾಗಿದೆ. ಸೇವೆ ಮಾಡುವುದಕ್ಕಿಂತಲೂ ಸೇವೆ ಮಾಡಬೇಕೆನ್ನುವ ಹಂಬಲ ಮುಖ್ಯವಾಗಿದೆ ಎಂದು ಹೇಳಿ ಹೇಮಾವತಿ ಹೆಗ್ಗಡೆಯವರು ರಾಮನಾಮತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕಿನ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯೊಂದಿಗೆ ಸಾಮೂಹಿಕ ಭಜನೆ ಹಾಗೂ ರಾಮನಾಮತಾರಕ ಮಂತ್ರ ಪಠಿಸಲಾಯಿತು. ಇದೇ ಸಂದರ್ಭದಲ್ಲಿ ಆಯೋಧ್ಯೆಯ ರಾಮಜನ್ಮಭೂಮಿಯ ಕರಸೇವೆಯಲ್ಲಿ ಭಾಗಿಯಾದ ಕೆಲವರನ್ನು ಸನ್ಮಾನಿಸಲಾಯಿತು

Related posts

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಉಜಿರೆ ದೊಂಪದಪಲ್ಕೆ ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ರೂ. 1.65 ಲಕ್ಷ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ

Suddi Udaya

ಇಂದಬೆಟ್ಟುನಲ್ಲಿ ‘ಓಂ ಶಕ್ತಿ’ ಜನರಲ್ ಸ್ಟೋರ್ ಶುಭಾರಂಭ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya
error: Content is protected !!