23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

ಧರ್ಮಸ್ಥಳ: ಮರ್ಯಾದಾ ಪುರುಷೋತ್ತಮನಾಗಿ ಮೆರೆದ ಶ್ರೀರಾಮ ಪಿತೃವಾಕ್ಯ ಪರಿಪಾಲನೆ, ಕುಟುಂಬದವರ ಮೇಲಿನ ಪ್ರೀತಿ-ವಿಶ್ವಾಸ, ಸತ್ಯ-ಧರ್ಮ, ನ್ಯಾಯ-ನೀತಿ ಪರಿಪಾಲನೆ, ತಾಳ್ಮೆ, ದೃಢಸಂಕಲ್ಪ ಮೊದಲಾದ ಮಾನವೀಯಮೌಲ್ಯ ಹಾಗೂ ನೈತಿಕಗುಣಗಳಿಂದಾಗಿ ಸಾವಿರಾರು ವರ್ಷಗಳಿಂದ ಲಕ್ಷಾಂತರ ಜನರ ಪ್ರತಿ ಮನದಲ್ಲಿಯೂ, ಮನೆಯಲ್ಲಿಯೂ ಸ್ಥಿರವಾಗಿ ನೆಲೆಸಿದ್ದಾನೆ. ರಾಮನ ಹೆಸರು ನಮ್ಮ ಉಸಿರಾಗಬೇಕು. ಎಲ್ಲರೂ ರಾಮನಾಗಲು ಅಸಾಧ್ಯ. ಆದರೆ ರಾಮನ ಆದರ್ಶ ಗುಣಗಳನ್ನಾದರೂ ಪಾಲಿಸಿ ರಾಮರಾಜ್ಯದ ಕನಸು ನನಸಾಗಬೇಕು ಎಂದು ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು.

ಅವರು ಧರ್ಮಸ್ಥಳದಲ್ಲಿ ಜ.22ರಂದು ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಿ ಮಾತನಾಡಿದರು.

ರಾಮನನ್ನು ಹಲವರು ದೇವರಾಗಿ ಆರಾಧಿಸಿದರೆ ಅನೇಕ ಮಂದಿ ಆತನ ಆದರ್ಶ, ಮಾನವೀಯ ಗುಣಗಳಿಗಾಗಿ ಗೌರವಿಸಿ ಅನುಸರಿಸುತ್ತಾರೆ. ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣಪ್ರತಿಷ್ಠೆಯೊಂದಿಗೆ ಅದು ಧರ್ಮಸ್ಥಳದಂತೆ ಸರ್ವಧರ್ಮೀಯರ ಶ್ರದ್ಧಾ-ಭಕ್ತಿಯ ಕೇಂದ್ರವಾಗಿ ಬೆಳೆಯಲಿದೆ, ಬೆಳಗಲಿದೆ. ಅಯೋಧ್ಯೆಯೂ ಹಲವು ಮಂದಿ ತೀರ್ಥಂಕರರ ಜನ್ಮಸ್ಥಳವಾಗಿದ್ದು ಜೈನರಿಗೂ ಪವಿತ್ರ ತೀರ್ಥಕ್ಷೇತ್ರವಾಗಿದೆ ಎಂದು ಅವರು ಹೇಳಿದರು.

ಸಾಹಿತಿಗಳು, ಕವಿಗಳು, ರಾಮಾಯಣ ಗ್ರಂಥ ರಚನೆ ಮೂಲಕ ಪದ್ಯ, ನಾಟಕ, ಹರಿಕಥೆ, ಯಕ್ಷಗಾನ ಮೂಲಕ ರಾಮನ ಜೀವನ-ಸಾಧನೆ ಚಿತ್ರಿಸಿದ್ದಾರೆ. ವೈವಿಧ್ಯಮಯ ರಾಮಾಯಣ ಕೃತಿಗಳು ಪ್ರಕಟವಾಗಿವೆ. ಟಿ.ವಿ.ಯಲ್ಲಿ ರಮಾನಂದ ಸಾಗರರ ನೇತೃತ್ವದಲ್ಲಿ ಪ್ರಸಾರವಾದ ರಾಮಾಯಣ ಕೋಟ್ಯಾಂತರ ಜನರ ಮುಕ್ತ ಪ್ರಶಂಸೆಗೆ ಪಾತ್ರವಾಗಿದೆ. ಮಾನಸಿಕ ಸ್ಥಿರತೆ ಹಾಗೂ ಮಾನವೀಯ ಮೌಲ್ಯಗಳಿಗಾಗಿ ರಾಮ ಕೋಟ್ಯಾಂತರ ಜನರ ಮನದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ದೃಢಸಂಕಲ್ಪ ಹಾಗೂ ಲಕ್ಷಾಂತರ ಭಕ್ತರ ಕಠಿಣ ವ್ರತ-ನಿಯಮಗಳ ಪಾಲನೆ, ಶ್ರದ್ಧಾಭಕ್ತಿಯಿಂದ ರಾಮಮಂದಿರದ ಕನಸು ನನಸಾಗಿದೆ. ಸೇವೆ ಮಾಡುವುದಕ್ಕಿಂತಲೂ ಸೇವೆ ಮಾಡಬೇಕೆನ್ನುವ ಹಂಬಲ ಮುಖ್ಯವಾಗಿದೆ ಎಂದು ಹೇಳಿ ಹೇಮಾವತಿ ಹೆಗ್ಗಡೆಯವರು ರಾಮನಾಮತಾರಕ ಮಂತ್ರ ಪಠಣಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕಿನ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯೊಂದಿಗೆ ಸಾಮೂಹಿಕ ಭಜನೆ ಹಾಗೂ ರಾಮನಾಮತಾರಕ ಮಂತ್ರ ಪಠಿಸಲಾಯಿತು. ಇದೇ ಸಂದರ್ಭದಲ್ಲಿ ಆಯೋಧ್ಯೆಯ ರಾಮಜನ್ಮಭೂಮಿಯ ಕರಸೇವೆಯಲ್ಲಿ ಭಾಗಿಯಾದ ಕೆಲವರನ್ನು ಸನ್ಮಾನಿಸಲಾಯಿತು

Related posts

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

6ನೇ ಏಷ್ಯನ್ ಯೋಗಾಸನ ಚಾಂಪಿಯನ್‌ಶಿಪ್ 2025 : ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಆಹ್ವಾನ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ: ಭಾರತೀಯ ಜೀವ ವಿಮಾ ನಿಗಮ ದಿಂದ ಡಾ.ಹೆಗ್ಗಡೆಯವರಿಗೆ ಗೌರವಾರ್ಪಣೆ; ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

Suddi Udaya

ಅರಸಿನಮಕ್ಕಿ ಶಿವಳ್ಳಿ ಸಮಾಜದ ಸಭೆ

Suddi Udaya
error: Content is protected !!