ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಪ್ರಯುಕ್ತ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಸೋಮವಾರ ಶ್ರೀರಾಮ ತಾರಕ ಮಂತ್ರ ಹೋಮ, ವಿಶೇಷ ಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು.

ಆಡಳಿತ ಸಮಿತಿ ಕಾರ್ಯದರ್ಶಿ ಜಯಂತ ಕೋಟ್ಯಾನ್, ಸಮಿತಿ ಸದಸ್ಯರಾದ ರತ್ನಾಕರ ಬುಣ್ಣಾನ್, ವಿಜಯ ಆರಿಗ, ಅಣ್ಣಪ್ಪ ಹೆಗ್ಡೆ, ಸುರೇಂದ್ರ ಸಾಲ್ಯಾನ್, ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಭಟ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಪದ್ಮಶ್ರೀ ಜೈನ್, ಬಾಲಕೃಷ್ಣ ಬಂಗೇರ, ಸದಸ್ಯ ಅಶೋಕ್ ಪೂಜಾರಿ, ರವೀಂದ್ರ ಹೆಗ್ಡೆ ಉಚ್ಚೂರು, ಯಶೋಧರ ಬಂಗೇರ ಮತ್ತು ಗ್ರಾಮಸ್ಥರು ಇದ್ದರು.

Leave a Comment

error: Content is protected !!