September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

ಅರಸಿನಮಕ್ಕಿ: ಅಯೋಧ್ಯ ಪ್ರಭು ಶ್ರೀರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಕುಂಟಾಲಪಲ್ಕೆ ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ರಾಮೋತ್ಸವ ಮತ್ತು ಹೋಳಿಗೆ ಹಬ್ಬವನ್ನು ಜ.22ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟೀಯ ಸ್ವಯಂ ಸೇವಾ ಸಂಘದ ಹಿರಿಯ ಕಾರ್ಯಕರ್ತರಾದ ಕೃಷ್ಣ ಭಟ್ ಕೊಕ್ಕಡ ಇವರು ಮಾತನಾಡಿ ಅಯೋಧ್ಯೆಯ ಹೋರಾಟದ ಬಗ್ಗೆ ಮಾತನಾಡಿ ಸಂಘ ಶಕ್ತಿಯ ಮಹತ್ವ ತಿಳಿಸಿದರು.

ಕಾರ್ಯಕ್ರಮದಲ್ಲಿ ಅರಿಕೆಗುಡ್ಡೆ ಬ್ರಹ್ಮ ಕಲಶದ ಅಧ್ಯಕ್ಷರು ಆಗಿರುವ ಪ್ರಕಾಶ್ ಪಿಲಿಕಬೆ ಮಾತನಾಡಿ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದಲ್ಲಿ ಕಪಿಲ ಕೇಸರಿ ಹಿತೈಷಿಗಳಾದ ಅಶೋಕ್ ಭೀಡೆ, ಹತ್ಯಡ್ಕ ಸೇವಾ ಸಹಕಾರಿ ಸಂಘದ ಸದಸ್ಯರಾದ ಧರ್ಮರಾಜ ಗೌಡ ಅಡ್ಕಡಿ, ಹತ್ಯಡ್ಕ ಪಂಚಾಯತ್ ಸದಸ್ಯರಾದ ಪ್ರೇಮಚಂದ್ರ, ಕಪಿಲ ಕೇಸರಿ ಅಧ್ಯಕ್ಷರಾದ ರಾಜೇಶ್ ಗೌಡ ಬೊಳ್ಳೋಡಿ ಉಪಸ್ಥಿತರಿದ್ದರು.


ವ್ರಕ್ಷ ವರ್ಧನ್ ಗೋಖಲೆ ಪ್ರಸ್ತಾವಿಕ ನುಡಿಗಳಾಡಿದರು. ಸುಮಂತ್ ಗೌಡ ಅಳಕ್ಕೆ ಸ್ವಾಗತಿಸಿ ಅನ್ವಿತ್ ರೈ ವಂದಿಸಿದರು. ಶ್ರೀವತ್ಸ ಗೋಖಲೆ ಕಾರ್ಯಕ್ರಮ ನಿರೂಪಿಸಿದರು.
4 ತಂಡಗಳಿಂದ ಭಜನಾ ಕಾರ್ಯಕ್ರಮ ನಡೆದು ಹೋಳಿಗೆ ಹಬ್ಬ ಮತ್ತು ದೀಪಾವಳಿ ಹಬ್ಬ ಆಚರಿಸಲಾಯಿತು

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya

ಧರ್ಮಸ್ಥಳ ಗಣಪತಿ ದೇವಸ್ಥಾನದ ವ್ಯವಸ್ಥಾಪಕರಾಗಿದ್ದ ಎಂ. ಕೃಷ್ಣ ಭಟ್ ನಿಧನ

Suddi Udaya

ಮೈಸೂರು ಜಿಲ್ಲಾ ನ್ಯಾಯಾಲಯದ ನೋಟರಿಗಳ ಕಟ್ಟಡಕ್ಕೆ ಶಂಕುಸ್ಥಾಪನೆ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ

Suddi Udaya

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya
error: Content is protected !!