25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

ಬೆಳ್ತಂಗಡಿ: ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವವು ವಿಜೃಂಭಣೆಯಿಂದ ಜ.22 ರಂದು ನಡೆಯಿತು.

ಬೆಳಗ್ಗೆ ವಿಷ್ಣು ಸಹಸ್ರನಾಮ ಪಠಣದೊಂದಿಗೆ ಆರಂಭಗೊಂಡು ಪೂಜಾ ವಿಧಿ ವಿಧಾನಗಳೊಂದಿಗೆ ನಡೆಯಿತು. ವಿಶೇಷವಾಗಿ ಸಾರ್ವಜನಿಕರಿಗೆ ಗೂಡು ದೀಪ ಸ್ಪರ್ಧೆ ಹಾಗೂ ಮಕ್ಕಳಿಗೆ ಪ್ರಭು ಶ್ರೀ ರಾಮ, ಸೀತಾಮಾತೆ ಹಾಗೂ ಹನುಮಂತನ ವೇಷ ಸ್ಪರ್ಧೆ ಆಯೋಜಿಸಲಾಗಿತ್ತು, ಇದರೊಂದಿಗೆ ಅಯೋಧ್ಯೆಯಲ್ಲಿನ ಶ್ರೀರಾಮದೇವರ ಪ್ರತಿಷ್ಠಾಪನೆಯ ನೇರ ವೀಕ್ಷಣೆಯು ಟ್ರಸ್ಟ್ ವತಿಯಿಂದ ಆಯೋಜನೆ ಮಾಡಲಾಗಿತ್ತು. ಊರ ಹಾಗೂ ಪರ ಊರ ಭಕ್ತರು ಇದರ ಸದುಪಯೋಗವನ್ನು ಪಡೆದರು.

ನಂತರ ಭಜನೆ ಹಾಗೂ ರಾಮ ತಾರಕ ಮಂತ್ರದೊಂದಿಗೆ ಧಾರ್ಮಿಕ ಸಭೆಯು ಆರಂಭಗೊಂಡು ಗ್ರಾಮದ ಕರಸೇವಕರಿಗೆ ಗೌರವಾರ್ಪಣೆ ಮಾಡಲಾಯಿತು. ಡಾ। ಪ್ರದೀಪ್ ಆಟಿಕುಕ್ಕೆ ಅವರು ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಗೋಪಾಲಕೃಷ್ಣ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಹರೀಶ್ ಸಾಲ್ಯಾನ್, ನಿಕಟ ಪೂರ್ವಾಧ್ಯಕ್ಷರಾದ ಎ ಬಿ ಉಮೇಶ್ ,ಉಪಾಧ್ಯಕ್ಷರಾದ ತನುಜ ಶೇಖರ್, ವಿಶ್ವ ಹಿಂದು ಪರಿಷತ್ ಅಧ್ಯಕ್ಷರಾದ ವಿಜಯ ಕೆ ಹೊಡಿಕಾರ್ ವೇದಿಕೆಯಲ್ಲಿದ್ದರು, ಪ್ರಧಾನ ಕಾರ್ಯದರ್ಶಿಗಳಾದ ಧರ್ಣಪ್ಪಮೂಲ್ಯ ಸ್ವಾಗತಿಸಿ, ಗಣೇಶ್ ನೆಲ್ಲಿಪಲ್ಕೆ ವಂದಿಸಿದರು. ಸುರೇಶ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya
error: Content is protected !!