September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

ಬೆಳ್ತಂಗಡಿ: ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವವು ವಿಜೃಂಭಣೆಯಿಂದ ಜ.22 ರಂದು ನಡೆಯಿತು.

ಬೆಳಗ್ಗೆ ವಿಷ್ಣು ಸಹಸ್ರನಾಮ ಪಠಣದೊಂದಿಗೆ ಆರಂಭಗೊಂಡು ಪೂಜಾ ವಿಧಿ ವಿಧಾನಗಳೊಂದಿಗೆ ನಡೆಯಿತು. ವಿಶೇಷವಾಗಿ ಸಾರ್ವಜನಿಕರಿಗೆ ಗೂಡು ದೀಪ ಸ್ಪರ್ಧೆ ಹಾಗೂ ಮಕ್ಕಳಿಗೆ ಪ್ರಭು ಶ್ರೀ ರಾಮ, ಸೀತಾಮಾತೆ ಹಾಗೂ ಹನುಮಂತನ ವೇಷ ಸ್ಪರ್ಧೆ ಆಯೋಜಿಸಲಾಗಿತ್ತು, ಇದರೊಂದಿಗೆ ಅಯೋಧ್ಯೆಯಲ್ಲಿನ ಶ್ರೀರಾಮದೇವರ ಪ್ರತಿಷ್ಠಾಪನೆಯ ನೇರ ವೀಕ್ಷಣೆಯು ಟ್ರಸ್ಟ್ ವತಿಯಿಂದ ಆಯೋಜನೆ ಮಾಡಲಾಗಿತ್ತು. ಊರ ಹಾಗೂ ಪರ ಊರ ಭಕ್ತರು ಇದರ ಸದುಪಯೋಗವನ್ನು ಪಡೆದರು.

ನಂತರ ಭಜನೆ ಹಾಗೂ ರಾಮ ತಾರಕ ಮಂತ್ರದೊಂದಿಗೆ ಧಾರ್ಮಿಕ ಸಭೆಯು ಆರಂಭಗೊಂಡು ಗ್ರಾಮದ ಕರಸೇವಕರಿಗೆ ಗೌರವಾರ್ಪಣೆ ಮಾಡಲಾಯಿತು. ಡಾ। ಪ್ರದೀಪ್ ಆಟಿಕುಕ್ಕೆ ಅವರು ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಗೋಪಾಲಕೃಷ್ಣ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಹರೀಶ್ ಸಾಲ್ಯಾನ್, ನಿಕಟ ಪೂರ್ವಾಧ್ಯಕ್ಷರಾದ ಎ ಬಿ ಉಮೇಶ್ ,ಉಪಾಧ್ಯಕ್ಷರಾದ ತನುಜ ಶೇಖರ್, ವಿಶ್ವ ಹಿಂದು ಪರಿಷತ್ ಅಧ್ಯಕ್ಷರಾದ ವಿಜಯ ಕೆ ಹೊಡಿಕಾರ್ ವೇದಿಕೆಯಲ್ಲಿದ್ದರು, ಪ್ರಧಾನ ಕಾರ್ಯದರ್ಶಿಗಳಾದ ಧರ್ಣಪ್ಪಮೂಲ್ಯ ಸ್ವಾಗತಿಸಿ, ಗಣೇಶ್ ನೆಲ್ಲಿಪಲ್ಕೆ ವಂದಿಸಿದರು. ಸುರೇಶ್ ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ಧರ್ಮಸ್ಥಳ: ಆಟೋ ಚಾಲಕ ಸುಂದರ ಗೌಡ ನಿಧನ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ: ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ

Suddi Udaya

ವಿ.ಹಿಂ.ಪ. ಮಾತೃಶಕ್ತಿ, ದುರ್ಗಾವಾಹಿನಿ, ಮುಂಡಾಜೆ ಗ್ರಾಮ ಸಮಿತಿ ವತಿಯಿಂದ ಕಳೆಂಜ ಗೋಶಾಲೆಗೆ ಗೋವಿಗಾಗಿ ಮೇವು

Suddi Udaya

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya
error: Content is protected !!