July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

ಬಾಯ೯: ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀ ರಾಮಲಲ್ಲನ ಪ್ರಾಣ ಪ್ರತಿಷ್ಠಾಪನೆಯನ್ನು ಇಡೀ ವಿಶ್ವವೇ ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ದೇಶವಿದೇಶಗಳಲ್ಲಿ ಹೋಮ ಹವನ ಯಜ್ಞಾಧಿ ಕಾರ್ಯಗಳು ನಡೆದು ರಾಷ್ಟ್ರಮಂದಿರ ಲೋಕಾರ್ಪಣೆಯನ್ನು ಕಣ್ತುಂಬಿಕೊಂಡ ಸಂದರ್ಭದಲ್ಲಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಬಾರ್ಯದಲ್ಲಿ ಕೂಡ ದೇವರಿಗೆ ವಿಶೇಷ ಪೂಜೆ ಹಾಗೂ ಊರ ಭಕ್ತರಿಂದ ಮತ್ತು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಹೊಸಮುಗ್ರು ತೆಕ್ಕಾರು ಇವರಿಂದ ಭಜನಾ ಸಂಕೀರ್ತನೆ , ಅನ್ನಸಂತರ್ಪಣೆ ನಡೆಯಿತು.


ತೆಕ್ಕಾರು, ಬಾರ್ಯ, ಪುತ್ತಿಲ ಗ್ರಾಮದ ಭಕ್ತರು ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯದಲ್ಲಿ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಂದರ ನೂರಿತ್ತಾಯ, ಉಪಾಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಪರಂ‌‌ರ್ದ ಗುತ್ತು, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪೈ, ಟ್ರಸ್ಟ್ ಪ್ರಮುಖರಾದ ಪ್ರಮೀಳಾ, ಶಿವರಾಮ, ನಾರಾಯಣ ಗೌಡ ಹಾಗೂ ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್ ರೈ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್, ಸಿಬ್ಬಂದಿ ವರ್ಗ, ಸೇಸಪ್ಪ ಸಾಲ್ಯಾನ್, ಚೇತನ್ ಅದಮ, ಸುದರ್ಶನ್, ಗಣೇಶ್ ಕುಲಾಲ್, ಅರುಣ ಬಜೆಕಳ, ರಾಮಣ್ಣ ಗೌಡ, ಪ್ರಮೋದ್, ದಯಾನಂದ್ , ದಯಾಯಂತಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ವರ್ತಕರ ಸಂಘದಿಂದ ಅಭಿನಂದನೆ

Suddi Udaya

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಆಯ್ಕೆ

Suddi Udaya

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯಲ್ಲಿ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ನೀಡಲು ಬಂದ ತಿಮರೋಡಿ ಬೆಂಬಲಿಗರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!