23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಉಜಿರೆ: ದೇಶದ ಶಾಲಾ ಮಕ್ಕಳಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆಸುವ ಮತ್ತು ಅವರನ್ನು ವಿಜ್ಞಾನಿಗಳನ್ನಾಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಮ್ಮಿಕೊಂಡಿದ್ದ 31ನೇ ರಾಜ್ಯಮಟ್ಟದ ವಿಜ್ಞಾನ ಸಮಾವೇಶವು ಕಲಬುರ್ಗಿ ಜಿಲ್ಲೆ ಸೇಡಮ್ ನ ಶ್ರೀ ಕೊತ್ತಲ ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ಜರುಗಿತು.

ಈ ಸಮಾವೇಶದಲ್ಲಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಉಜಿರೆ(ರಾಜ್ಯ ಪಠ್ಯಕ್ರಮ)ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿಗಳಾದ ಅಧೀಷ್ ಬಿ. ಸಿ. ಮತ್ತು ಆಲಾಪ್ ಇವರು ಗ್ರಾಮೀಣ ಹಿರಿಯ ವಿಭಾಗದಲ್ಲಿ “Value addition for agri wastes and weeds” ಎಂಬ ಶೀರ್ಷಿಕೆಯಡಿ ವಿಜ್ಞಾನ ಯೋಜನೆ ಮಂಡಿಸಿರುತ್ತಾರೆ. ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಾದ ಸಚಿನ್ ಭಟ್ ಮತ್ತು ಸುಜನ್ ಗೌಡ ಇವರು ಗ್ರಾಮೀಣ ಕಿರಿಯ ವಿಭಾಗದಲ್ಲಿ “Value Added products of unused Banana fibres” ಎಂಬ ಶೀರ್ಷಿಕೆಯಡಿ ವಿಜ್ಞಾನ ಯೋಜನೆ ಮಂಡಿಸಿರುತ್ತಾರೆ.
ಈ ಎರಡು ತಂಡಗಳು ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತವೆ.

ಈ ಸ್ಪರ್ಧೆಯಲ್ಲಿ ರಾಜ್ಯದಾದ್ಯಂತ ಒಟ್ಟು 121 ತಂಡಗಳು ಭಾಗವಹಿಸಿದ್ದವು.
ಇವರಿಗೆ ಶಿಕ್ಷಕಿಯರಾದ ಶ್ರೀಮತಿ ಧನ್ಯವತಿ ಮತ್ತು ಶ್ರೀಮತಿ ಶೋಭಾ ಎಸ್ ಇವರು ಸಹಕರಿಸಿರುತ್ತಾರೆ. ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾ ಲಕ್ಷ್ಮಿ ಎನ್. ನಾಯಕ್ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya

ನಾಲ್ಕೂರು: ತೋಟದಪಲ್ಕೆ ನಿವಾಸಿ ಭಾನುಮತಿ ನಿಧನ

Suddi Udaya

ಬೀಳುವ ಸ್ಥಿತಿಯಲ್ಲಿದ್ದ ಬೋರ್ಡನ್ನು ತೆರವುಗೊಳಿಸಿದ ನ.ಪಂ.

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya
error: Content is protected !!