38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ. ಮಂದಿರದೊಳಗಿನ ಶ್ರೀ ರಾಮನ ಬಿಂಬದ ಪ್ರಾಣಪ್ರತಿಷ್ಠೆಯು ಸೂಕ್ತ ರೀತಿಯಲ್ಲಿ ಜರುಗಿತು. ಪ್ರತಿಷ್ಟಿತ ಮಠಾಧಿಪತಿಗಳು ಮತ್ತು ಎಲ್ಲಾ ರಂಗದ ಪ್ರಮುಖರು ಈ ಐತಿಹಾಸಿಕ ಕಾರ್‍ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮವು ಅತ್ಯಂತ ಶಿಸ್ತಿನಿಂದ ನಡೆದಿದೆ.

ಅಯೋಧ್ಯೆಯ ನಗರವನ್ನು ಹೂವಿನಿಂದ ಶೃಂಗಾರಗೊಳಿಸಿದ್ದರು. ಅಲ್ಲಲ್ಲಿ ಸ್ವಾಗತ ನೃತ್ಯವು ನಡೆಯುತ್ತಿದ್ದವು. ಎಲ್ಲಾ ರೀತಿಯಿಂದಲೂ ಕಾರ್ಯಕ್ರಮವು ವ್ಯವಸ್ಥಿತವಾಗಿಯೇ ನಡೆಯಿತು.
ರಾಮಮಂದಿರದ ಎದುರುಗಡೆ ಕುಳಿತ ಎಲ್ಲಾ ಸಂತರಿಗೂ ಅಲ್ಲಿಯೇ ಆಹಾರ, ಪಾನೀಯಗಳನ್ನು ವಿತರಿಸಿದರು. ಅಲ್ಲಿಯ ಹವಾಮಾನದಲ್ಲಿ ಚೆನ್ನಾಗಿ ಚಳಿಯೇ ಇತ್ತು, ಆದರೂ ಆತ್ಮೀಯವಾದ ಸ್ವಾಗತ ಮತ್ತು ವ್ಯವಸ್ಥಿತವಾದ ಕಾರ್ಯಕ್ರಮದಿಂದಾಗಿ ನಮಗೆಲ್ಲರಿಗೂ ಅಷ್ಟು ಸಮಸ್ಯೆಯೇ ಎನಿಸಲಿಲ್ಲ. ಹೊರಗಡೆ ಕುಳಿತವರಿಗೆ ಟಿ.ವಿ. ಪರದೆಯ ಮುಖಾಂತರ ಒಳಗೆ ನಡೆಯುವ ಪೂಜಾ ವಿಧಿ-ವಿಧಾನಗಳನ್ನು ತೋರಿಸುತ್ತಿದ್ದರು.

ಈ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಿಂದಾಗಿ ಮಹಾತ್ಮರೆಲ್ಲರೂ ಪ್ರಸನ್ನರಾಗಿ ಹೋದರು. ಇಂದು ಈ ಕಾರ್ಯಕ್ರಮದಿಂದಾಗಿ ಅಲ್ಲಲ್ಲಿ ಪ್ರಯಾಣಕ್ಕೆ ಅಡೆತಡೆಗಳಿದ್ದವು. ಇಂದಿನಿಂದ ಮಂದಿರಕ್ಕೆ ಮುಕ್ತ ದರ್ಶನ ಎಂದು ಘೋಷಿಸಲಾಗಿದೆ.


ಗೌರವಾನ್ವಿತ ಪ್ರಧಾನಮಂತ್ರಿಯವರಾದ ನರೇಂದ್ರ ಮೋದಿಜೀಯವರು ಎಲ್ಲರನ್ನೂ ಉದ್ಧೇಶಿಸಿ ಮಾತನಾಡಿದರು ಹಾಗೂ ಎಲ್ಲಾ ಸಂತರ ಬಳಿ ಬಂದು ಗೌರವದಿಂದ ಮಾತನಾಡಿಸಿದರು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯವನ್ನು ತಿಳಿಸಿದರು.

Related posts

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಮಚ್ಚಿನ ಗ್ರಾ.ಪಂ. ನಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆಯನ್ನು ಎಲ್ ಇ ಡಿ ಪರದೆ ಮೂಲಕ ವೀಕ್ಷಣೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ರೂ. 1ಲಕ್ಷ ದೇಣಿಗೆ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ನಾಳ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya
error: Content is protected !!