April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ. ಮಂದಿರದೊಳಗಿನ ಶ್ರೀ ರಾಮನ ಬಿಂಬದ ಪ್ರಾಣಪ್ರತಿಷ್ಠೆಯು ಸೂಕ್ತ ರೀತಿಯಲ್ಲಿ ಜರುಗಿತು. ಪ್ರತಿಷ್ಟಿತ ಮಠಾಧಿಪತಿಗಳು ಮತ್ತು ಎಲ್ಲಾ ರಂಗದ ಪ್ರಮುಖರು ಈ ಐತಿಹಾಸಿಕ ಕಾರ್‍ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮವು ಅತ್ಯಂತ ಶಿಸ್ತಿನಿಂದ ನಡೆದಿದೆ.

ಅಯೋಧ್ಯೆಯ ನಗರವನ್ನು ಹೂವಿನಿಂದ ಶೃಂಗಾರಗೊಳಿಸಿದ್ದರು. ಅಲ್ಲಲ್ಲಿ ಸ್ವಾಗತ ನೃತ್ಯವು ನಡೆಯುತ್ತಿದ್ದವು. ಎಲ್ಲಾ ರೀತಿಯಿಂದಲೂ ಕಾರ್ಯಕ್ರಮವು ವ್ಯವಸ್ಥಿತವಾಗಿಯೇ ನಡೆಯಿತು.
ರಾಮಮಂದಿರದ ಎದುರುಗಡೆ ಕುಳಿತ ಎಲ್ಲಾ ಸಂತರಿಗೂ ಅಲ್ಲಿಯೇ ಆಹಾರ, ಪಾನೀಯಗಳನ್ನು ವಿತರಿಸಿದರು. ಅಲ್ಲಿಯ ಹವಾಮಾನದಲ್ಲಿ ಚೆನ್ನಾಗಿ ಚಳಿಯೇ ಇತ್ತು, ಆದರೂ ಆತ್ಮೀಯವಾದ ಸ್ವಾಗತ ಮತ್ತು ವ್ಯವಸ್ಥಿತವಾದ ಕಾರ್ಯಕ್ರಮದಿಂದಾಗಿ ನಮಗೆಲ್ಲರಿಗೂ ಅಷ್ಟು ಸಮಸ್ಯೆಯೇ ಎನಿಸಲಿಲ್ಲ. ಹೊರಗಡೆ ಕುಳಿತವರಿಗೆ ಟಿ.ವಿ. ಪರದೆಯ ಮುಖಾಂತರ ಒಳಗೆ ನಡೆಯುವ ಪೂಜಾ ವಿಧಿ-ವಿಧಾನಗಳನ್ನು ತೋರಿಸುತ್ತಿದ್ದರು.

ಈ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಿಂದಾಗಿ ಮಹಾತ್ಮರೆಲ್ಲರೂ ಪ್ರಸನ್ನರಾಗಿ ಹೋದರು. ಇಂದು ಈ ಕಾರ್ಯಕ್ರಮದಿಂದಾಗಿ ಅಲ್ಲಲ್ಲಿ ಪ್ರಯಾಣಕ್ಕೆ ಅಡೆತಡೆಗಳಿದ್ದವು. ಇಂದಿನಿಂದ ಮಂದಿರಕ್ಕೆ ಮುಕ್ತ ದರ್ಶನ ಎಂದು ಘೋಷಿಸಲಾಗಿದೆ.


ಗೌರವಾನ್ವಿತ ಪ್ರಧಾನಮಂತ್ರಿಯವರಾದ ನರೇಂದ್ರ ಮೋದಿಜೀಯವರು ಎಲ್ಲರನ್ನೂ ಉದ್ಧೇಶಿಸಿ ಮಾತನಾಡಿದರು ಹಾಗೂ ಎಲ್ಲಾ ಸಂತರ ಬಳಿ ಬಂದು ಗೌರವದಿಂದ ಮಾತನಾಡಿಸಿದರು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯವನ್ನು ತಿಳಿಸಿದರು.

Related posts

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, – ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಶಿರ್ಲಾಲುವಿನ ರಾಜಶ್ರೀ ಜಗದೀಶ್

Suddi Udaya

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

Suddi Udaya
error: Content is protected !!