September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ. ಮಂದಿರದೊಳಗಿನ ಶ್ರೀ ರಾಮನ ಬಿಂಬದ ಪ್ರಾಣಪ್ರತಿಷ್ಠೆಯು ಸೂಕ್ತ ರೀತಿಯಲ್ಲಿ ಜರುಗಿತು. ಪ್ರತಿಷ್ಟಿತ ಮಠಾಧಿಪತಿಗಳು ಮತ್ತು ಎಲ್ಲಾ ರಂಗದ ಪ್ರಮುಖರು ಈ ಐತಿಹಾಸಿಕ ಕಾರ್‍ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮವು ಅತ್ಯಂತ ಶಿಸ್ತಿನಿಂದ ನಡೆದಿದೆ.

ಅಯೋಧ್ಯೆಯ ನಗರವನ್ನು ಹೂವಿನಿಂದ ಶೃಂಗಾರಗೊಳಿಸಿದ್ದರು. ಅಲ್ಲಲ್ಲಿ ಸ್ವಾಗತ ನೃತ್ಯವು ನಡೆಯುತ್ತಿದ್ದವು. ಎಲ್ಲಾ ರೀತಿಯಿಂದಲೂ ಕಾರ್ಯಕ್ರಮವು ವ್ಯವಸ್ಥಿತವಾಗಿಯೇ ನಡೆಯಿತು.
ರಾಮಮಂದಿರದ ಎದುರುಗಡೆ ಕುಳಿತ ಎಲ್ಲಾ ಸಂತರಿಗೂ ಅಲ್ಲಿಯೇ ಆಹಾರ, ಪಾನೀಯಗಳನ್ನು ವಿತರಿಸಿದರು. ಅಲ್ಲಿಯ ಹವಾಮಾನದಲ್ಲಿ ಚೆನ್ನಾಗಿ ಚಳಿಯೇ ಇತ್ತು, ಆದರೂ ಆತ್ಮೀಯವಾದ ಸ್ವಾಗತ ಮತ್ತು ವ್ಯವಸ್ಥಿತವಾದ ಕಾರ್ಯಕ್ರಮದಿಂದಾಗಿ ನಮಗೆಲ್ಲರಿಗೂ ಅಷ್ಟು ಸಮಸ್ಯೆಯೇ ಎನಿಸಲಿಲ್ಲ. ಹೊರಗಡೆ ಕುಳಿತವರಿಗೆ ಟಿ.ವಿ. ಪರದೆಯ ಮುಖಾಂತರ ಒಳಗೆ ನಡೆಯುವ ಪೂಜಾ ವಿಧಿ-ವಿಧಾನಗಳನ್ನು ತೋರಿಸುತ್ತಿದ್ದರು.

ಈ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಿಂದಾಗಿ ಮಹಾತ್ಮರೆಲ್ಲರೂ ಪ್ರಸನ್ನರಾಗಿ ಹೋದರು. ಇಂದು ಈ ಕಾರ್ಯಕ್ರಮದಿಂದಾಗಿ ಅಲ್ಲಲ್ಲಿ ಪ್ರಯಾಣಕ್ಕೆ ಅಡೆತಡೆಗಳಿದ್ದವು. ಇಂದಿನಿಂದ ಮಂದಿರಕ್ಕೆ ಮುಕ್ತ ದರ್ಶನ ಎಂದು ಘೋಷಿಸಲಾಗಿದೆ.


ಗೌರವಾನ್ವಿತ ಪ್ರಧಾನಮಂತ್ರಿಯವರಾದ ನರೇಂದ್ರ ಮೋದಿಜೀಯವರು ಎಲ್ಲರನ್ನೂ ಉದ್ಧೇಶಿಸಿ ಮಾತನಾಡಿದರು ಹಾಗೂ ಎಲ್ಲಾ ಸಂತರ ಬಳಿ ಬಂದು ಗೌರವದಿಂದ ಮಾತನಾಡಿಸಿದರು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಅಭಿಪ್ರಾಯವನ್ನು ತಿಳಿಸಿದರು.

Related posts

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಕ್ಸಲೆ೦ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿರಶ್ಮಿತಾ ಜೈನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya

ಪಂಚ ರಾಜ್ಯಗಳ ವಿಧಾನ ಸಭೆ ಚುನಾವಣೆ: ಬಿಜೆಪಿಗೆ ದಿಗ್ವಿಜಯ-ಪಾಲೇದು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya
error: Content is protected !!