September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

ಬೆಳ್ತಂಗಡಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಹಾಗೂ ರಾಮನ ಪ್ರತಿಷ್ಠಾಪನೆಯ ಅಂಗವಾಗಿ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘ, ರಾಮ ಕ್ಷತ್ರಿಯ ಮಹಿಳಾ ವೃಂದ, ರಾಮ ಕ್ಷತ್ರಿಯ ಯುವ ಸಂಘ ಮತ್ತು ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಹಯೋಗದಲ್ಲಿ ಬೆಳ್ತಂಗಡಿಯ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆವರಣದಲ್ಲಿ, ಶ್ರೀ ರಾಮ ಪೂಜೆ, ಭಜನೆ, ಸಂಗೀತದೊಂದಿಗೆ, 1992 ರಲ್ಲಿ ಅಯೋಧ್ಯೆಯಲ್ಲಿ ಕರ ಸೇವೆಯಲ್ಲಿ ಭಾಗವಹಿಸಿದ್ದ ವೇಣುಗೋಪಾಲ್ ರವರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಾಲ್ಕು ಸಂಸ್ಥೆಯ ಅಧ್ಯಕ್ಷರು, ಚಂದ್ರಕಾಂತ, ಶ್ರೀಮತಿ ಕಲಾವತಿ ,ಲಿಖಿತ್, ಪ್ರಭಾಕರ ಸಿ ಹೆಚ್, ಸ್ಥಾಪಕ ಅಧ್ಯಕ್ಷ ವಿಶ್ವನಾಥ ಆರ್ ನಾಯಕ್, ವಿಜಯ ಕುಮಾರ್, ಮುಂತಾದವರು ಭಾಗವಹಿಸಿದ್ದರು.

ಪ್ರಮೋದ್ ಆರ್ ನಾಯಕ್ ರವರು ಕಾರ್ಯಕ್ರಮ ನಿರೂಪಿಸಿದರು. ಸುಮಾರು 100 ಕ್ಕೂ ಅಧಿಕ ಸಮಾಜ ಬಾಂಧವರು ಭಾಗವಹಿಸಿ, ತಮ್ಮ ಮನೆಯಲ್ಲಿ ತಯಾರಿಸಿದ ವಿವಿಧ ಖಾದ್ಯಗಳನ್ನು ಎಲ್ಲರಿಗೂ ವಿತರಿಸಿ, ಸಂಭ್ರಮದಿಂದ ಆಚರಿಸಿದರು. ಕಾರ್ಯದರ್ಶಿ ಸಂತೋಷ್ ಕುಮಾರ್ ವಂದಿಸಿದರು.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳಿಂದ ಗೌರವ ಅರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಕಾಲೇಜಿಗೆ ಪ್ರಾಜೆಕ್ಟರ್ ಹಸ್ತಾಂತರ ಮತ್ತು ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

Suddi Udaya

ಮಡಂತ್ಯಾರು ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಜಲ ಮೂಲ ಶುಚಿತ್ವ ಹಾಗೂ ಹಣ್ಣು ಹಂಪಲು ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!