23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

ಬೆಳ್ತಂಗಡಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಹಾಗೂ ರಾಮನ ಪ್ರತಿಷ್ಠಾಪನೆಯ ಅಂಗವಾಗಿ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘ, ರಾಮ ಕ್ಷತ್ರಿಯ ಮಹಿಳಾ ವೃಂದ, ರಾಮ ಕ್ಷತ್ರಿಯ ಯುವ ಸಂಘ ಮತ್ತು ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಹಯೋಗದಲ್ಲಿ ಬೆಳ್ತಂಗಡಿಯ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆವರಣದಲ್ಲಿ, ಶ್ರೀ ರಾಮ ಪೂಜೆ, ಭಜನೆ, ಸಂಗೀತದೊಂದಿಗೆ, 1992 ರಲ್ಲಿ ಅಯೋಧ್ಯೆಯಲ್ಲಿ ಕರ ಸೇವೆಯಲ್ಲಿ ಭಾಗವಹಿಸಿದ್ದ ವೇಣುಗೋಪಾಲ್ ರವರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಾಲ್ಕು ಸಂಸ್ಥೆಯ ಅಧ್ಯಕ್ಷರು, ಚಂದ್ರಕಾಂತ, ಶ್ರೀಮತಿ ಕಲಾವತಿ ,ಲಿಖಿತ್, ಪ್ರಭಾಕರ ಸಿ ಹೆಚ್, ಸ್ಥಾಪಕ ಅಧ್ಯಕ್ಷ ವಿಶ್ವನಾಥ ಆರ್ ನಾಯಕ್, ವಿಜಯ ಕುಮಾರ್, ಮುಂತಾದವರು ಭಾಗವಹಿಸಿದ್ದರು.

ಪ್ರಮೋದ್ ಆರ್ ನಾಯಕ್ ರವರು ಕಾರ್ಯಕ್ರಮ ನಿರೂಪಿಸಿದರು. ಸುಮಾರು 100 ಕ್ಕೂ ಅಧಿಕ ಸಮಾಜ ಬಾಂಧವರು ಭಾಗವಹಿಸಿ, ತಮ್ಮ ಮನೆಯಲ್ಲಿ ತಯಾರಿಸಿದ ವಿವಿಧ ಖಾದ್ಯಗಳನ್ನು ಎಲ್ಲರಿಗೂ ವಿತರಿಸಿ, ಸಂಭ್ರಮದಿಂದ ಆಚರಿಸಿದರು. ಕಾರ್ಯದರ್ಶಿ ಸಂತೋಷ್ ಕುಮಾರ್ ವಂದಿಸಿದರು.

Related posts

ಬಂದಾರು: ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದನ್ನು ಹಿಂದುರುಗಿಸಿ ಕೊಟ್ಟು ಮಾನವೀಯ ಮೆರೆದ ವಿನಯ್ ನಿವೇದಿತಾ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

Suddi Udaya

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya
error: Content is protected !!