22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

ಬೆಳ್ತಂಗಡಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಹಾಗೂ ರಾಮನ ಪ್ರತಿಷ್ಠಾಪನೆಯ ಅಂಗವಾಗಿ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘ, ರಾಮ ಕ್ಷತ್ರಿಯ ಮಹಿಳಾ ವೃಂದ, ರಾಮ ಕ್ಷತ್ರಿಯ ಯುವ ಸಂಘ ಮತ್ತು ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಹಯೋಗದಲ್ಲಿ ಬೆಳ್ತಂಗಡಿಯ ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆವರಣದಲ್ಲಿ, ಶ್ರೀ ರಾಮ ಪೂಜೆ, ಭಜನೆ, ಸಂಗೀತದೊಂದಿಗೆ, 1992 ರಲ್ಲಿ ಅಯೋಧ್ಯೆಯಲ್ಲಿ ಕರ ಸೇವೆಯಲ್ಲಿ ಭಾಗವಹಿಸಿದ್ದ ವೇಣುಗೋಪಾಲ್ ರವರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಾಲ್ಕು ಸಂಸ್ಥೆಯ ಅಧ್ಯಕ್ಷರು, ಚಂದ್ರಕಾಂತ, ಶ್ರೀಮತಿ ಕಲಾವತಿ ,ಲಿಖಿತ್, ಪ್ರಭಾಕರ ಸಿ ಹೆಚ್, ಸ್ಥಾಪಕ ಅಧ್ಯಕ್ಷ ವಿಶ್ವನಾಥ ಆರ್ ನಾಯಕ್, ವಿಜಯ ಕುಮಾರ್, ಮುಂತಾದವರು ಭಾಗವಹಿಸಿದ್ದರು.

ಪ್ರಮೋದ್ ಆರ್ ನಾಯಕ್ ರವರು ಕಾರ್ಯಕ್ರಮ ನಿರೂಪಿಸಿದರು. ಸುಮಾರು 100 ಕ್ಕೂ ಅಧಿಕ ಸಮಾಜ ಬಾಂಧವರು ಭಾಗವಹಿಸಿ, ತಮ್ಮ ಮನೆಯಲ್ಲಿ ತಯಾರಿಸಿದ ವಿವಿಧ ಖಾದ್ಯಗಳನ್ನು ಎಲ್ಲರಿಗೂ ವಿತರಿಸಿ, ಸಂಭ್ರಮದಿಂದ ಆಚರಿಸಿದರು. ಕಾರ್ಯದರ್ಶಿ ಸಂತೋಷ್ ಕುಮಾರ್ ವಂದಿಸಿದರು.

Related posts

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಮನೆ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹದಿಮೂರನೇ ಸುತ್ತಿನಲ್ಲಿ 13162 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

Suddi Udaya

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

Suddi Udaya

ಆಳ್ವಾಸ್ ಪದವಿ ಕಾಲೇಜಿನಲ್ಲಿ ವಾರ್ಷಿಕ ಕಾರ್ಯಕ್ರಮ ‘ಇನಾಮು 2026’

Suddi Udaya
error: Content is protected !!