25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

ಅಳದಂಗಡಿ: ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆಯ ಶುಭ ಸಂಧರ್ಭದಲ್ಲಿ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳು ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ಹೆಸರಿನಿಂದ ಪರಿಚಯಿಸಿಕೊಂಡರು.

ಶ್ರೀರಾಮ ದೇವರ ಜಯಘೋಷದೊಂದಿಗೆ ಶ್ಯಾಮಸುಂದರ್ ಭಟ್ ರವರ ಉಪಸ್ಥಿತಿಯಲ್ಲಿ ರಾಮಜ್ಯೋತಿಯನ್ನು ಬೆಳಗಿಸಿ ರಾಮ ನಗರವೆಂಬ ಹೆಸರನ್ನು ಉದ್ಘೋಷಿಸಲಾಯಿತು.

ದೀಪ ಪ್ರಜ್ವಲಿಸಿ ಮಾತನಾಡಿದ ಶ್ಯಾಮಸುಂದರ್ ಭಟ್ ರವರು ಎರಡು ಲೋಕಸಭೆಯ ಚುನಾವಣೆಯಲ್ಲಿ ನರೇಂದ್ರ ಮೋದಿಯವರಿಗೆ ಕೊಟ್ಟ ಎರಡು ಮತಗಳು ಸನಾತನಿಗಳ ಪಾವನ ಕ್ಷೇತ್ರಗಳಾದ ಕಾಶಿ ಮತ್ತು ಅಯೋಧ್ಯೆಯ ರಾಮಜನ್ಮಭೂಮಿಯನ್ನು ಪಡೆಯುವಲ್ಲಿ ಸಫಲವಾದವು 2024 ಲೋಕಸಭೆಯ ಚುನಾವಣೆಯಲ್ಲಿ ಮೋದಿಯವರಿಗೆ ಕೊಡುವ ಇನ್ನೊಂದು ಮತವು ಭಗವದ್ಭಕ್ತರಿಗೆ ಮಥುರೆಯನ್ನು ಒದಗಿಸಿ ಕೊಡುವಂತಾಗಲಿ ಎಂದು ಹಾರೈಸಿದರು.

ಪ್ರಗತಿಪರ ಕೃಷಿಕ ಜಗದೀಶ್ ರೈ ಹಾನಿಂಜರವರು ಮಾತನಾಡಿ ಮೋದಿಜಿಯವರ ಸದೃಢ ನೇತ್ರತ್ವದಿಂದಾಗಿ ಅಯೋಧ್ಯೆಯಲ್ಲಿ ರಾಮಭಕ್ತರು ರಾಮ ಮಂದಿರ ನೋಡುವಂತಾಯ್ತು, ರಾಷ್ಟ್ರೋತ್ಥನದ ಸತ್ಕಾರ್ಯಕ್ಕಾಗಿ ಮುಂದಿನ ಚುನಾವಣೆಯಲ್ಲಿ ಮೋದಿಜಿಯವರ ಬೆಂಬಲಕ್ಕೆ ನಿಂತು ರಾಷ್ಟ್ರ ಸೇವೆಗಾಗಿ ಇನ್ನಷ್ಟು ಶಕ್ತಿ ತುಂಬಬೇಕೆಂದು ಕರೆ ನೀಡಿದರು.

ಕುlತೃಷಾ ಆಚಾರ್ಯ ಮತ್ತು ಕುl ವೈಷ್ಣವಿ ಆಚಾರ್ಯರಿಂದ ಪ್ರಾರ್ಥನೆಯ ಬಳಿಕ ಚಿರಾಗ್ ಶೆಟ್ಟಿಯವರು ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು. ಮೋಹನ ದಾಸ್ ರವರು ಕಾರ್ಯಕ್ರಮ ನಿರೂಪಿಸಿದರು.. ಪ್ರಶಾಂತ್ ಶೆಟ್ಟಿ, ಮೋಹನ್ ಕುಲಾಲ್(ನಿವೃತ್ತ ಯೋಧ) ಸದಾಶಿವ ಶೆಟ್ಟಿ, ಜನ ಪ್ರತಿನಿಧಿ ಕೃಷ್ಣಪ್ಪ ಬಿಕ್ಕಿರ, ಪ್ರತೀಕ್ ಶೆಟ್ಟಿ ನೊಚ್ಚ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ರೂವಾರಿಗಳಾಗಿ ಬಿಕ್ಕಿರ ರಾಮನಗರ ನಿವಾಸಿಗಳಾದ ಚಿರಾಗ್ ಶೆಟ್ಟಿ, ಪ್ರದೀಪ್ ಆಚಾರ್ಯ, ಪ್ರಕಾಶ್ ಆಚಾರ್ಯ, ಪ್ರಸಾದ್ , ಶರತ್, ಮನೋಜ್ ,ಹರೀಶ್ ಕುಲಾಲ್, ಸಂದೀಪ್,ರಕ್ಷಿತ್ ರವರು ಶ್ರಮಿಸಿದರು . ಸುಬ್ರಹ್ಮಣ್ಯ ಆಚಾರ್ಯ ಪಾಲಬೆ , ಲತೇಶ್ ದೇವಾಡಿಗ , ರಾಜು ಶೆಟ್ಟಿ ಹೊಸಮನೆ ,ಪೂರ್ಣೇಶ್ ಕಾಪಿನಡ್ಕ, ದೇವದಾಸ್ ಸಾಲ್ಯಾನ್ , ವಾಸುದೇವ ಆಚಾರ್ಯ, ಪ್ರಭಾಕರ್ ಆಚಾರ್ಯ,ನವೀನ್ ಆಚಾರ್ಯ, ಯಶೋಧರ ಸುವರ್ಣ , ಸಹಿತ ಸಮಸ್ತ ಸ್ಥಳೀಯ ನಿವಾಸಿಗಳು ಹಾಜರಿದ್ದರು. ಪ್ರತೀಕ್ ಶೆಟ್ಟಿಯವರು ನೆರೆದ ಶ್ರೀರಾಮ ಭಕ್ತರಿಗೆ ಧನ್ಯವಾದ ಸಮರ್ಪಿಸಿದರು. ಉಪಹಾರದ ಹಂಚಿಕೆಯೊಂದಿಗೆ “ರಾಮ ನಗರ” ನಾಮನಿರ್ದೇಶನ ಕಾರ್ಯಕ್ರಮ ಮುಕ್ತಾಯವಾಯಿತು.

Related posts

ನಿಡ್ಲೆ: ಸಿಡಿಲು ಬಡಿದು ಗಾಣಂತಿ ರಾಜೇಂದ್ರ ಗೌಡರವರ ಪಂಪು ಶೆಡ್, ಬೋರ್ ಪಂಪು ಸಹಿತ ಮನೆಗೆ ಹಾನಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಹೊಸ ತಿರುವು

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya
error: Content is protected !!