24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

ಅರಸಿನಮಕ್ಕಿ: ಅಯೋಧ್ಯ ಪ್ರಭು ಶ್ರೀರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಕುಂಟಾಲಪಲ್ಕೆ ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ರಾಮೋತ್ಸವ ಮತ್ತು ಹೋಳಿಗೆ ಹಬ್ಬವನ್ನು ಜ.22ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟೀಯ ಸ್ವಯಂ ಸೇವಾ ಸಂಘದ ಹಿರಿಯ ಕಾರ್ಯಕರ್ತರಾದ ಕೃಷ್ಣ ಭಟ್ ಕೊಕ್ಕಡ ಇವರು ಮಾತನಾಡಿ ಅಯೋಧ್ಯೆಯ ಹೋರಾಟದ ಬಗ್ಗೆ ಮಾತನಾಡಿ ಸಂಘ ಶಕ್ತಿಯ ಮಹತ್ವ ತಿಳಿಸಿದರು.

ಕಾರ್ಯಕ್ರಮದಲ್ಲಿ ಅರಿಕೆಗುಡ್ಡೆ ಬ್ರಹ್ಮ ಕಲಶದ ಅಧ್ಯಕ್ಷರು ಆಗಿರುವ ಪ್ರಕಾಶ್ ಪಿಲಿಕಬೆ ಮಾತನಾಡಿ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದಲ್ಲಿ ಕಪಿಲ ಕೇಸರಿ ಹಿತೈಷಿಗಳಾದ ಅಶೋಕ್ ಭೀಡೆ, ಹತ್ಯಡ್ಕ ಸೇವಾ ಸಹಕಾರಿ ಸಂಘದ ಸದಸ್ಯರಾದ ಧರ್ಮರಾಜ ಗೌಡ ಅಡ್ಕಡಿ, ಹತ್ಯಡ್ಕ ಪಂಚಾಯತ್ ಸದಸ್ಯರಾದ ಪ್ರೇಮಚಂದ್ರ, ಕಪಿಲ ಕೇಸರಿ ಅಧ್ಯಕ್ಷರಾದ ರಾಜೇಶ್ ಗೌಡ ಬೊಳ್ಳೋಡಿ ಉಪಸ್ಥಿತರಿದ್ದರು.


ವ್ರಕ್ಷ ವರ್ಧನ್ ಗೋಖಲೆ ಪ್ರಸ್ತಾವಿಕ ನುಡಿಗಳಾಡಿದರು. ಸುಮಂತ್ ಗೌಡ ಅಳಕ್ಕೆ ಸ್ವಾಗತಿಸಿ ಅನ್ವಿತ್ ರೈ ವಂದಿಸಿದರು. ಶ್ರೀವತ್ಸ ಗೋಖಲೆ ಕಾರ್ಯಕ್ರಮ ನಿರೂಪಿಸಿದರು.
4 ತಂಡಗಳಿಂದ ಭಜನಾ ಕಾರ್ಯಕ್ರಮ ನಡೆದು ಹೋಳಿಗೆ ಹಬ್ಬ ಮತ್ತು ದೀಪಾವಳಿ ಹಬ್ಬ ಆಚರಿಸಲಾಯಿತು

Related posts

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಕೊಕ್ಕಡ: ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ: ನೆರವಿನ ನಿರೀಕ್ಷೆಯಲ್ಲಿ ವೃದ್ಧ ದಂಪತಿ

Suddi Udaya

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!