September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

ಕಾಶಿಪಟ್ಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಶಿಪಟ್ಣ ಅಂಗನವಾಡಿ ಮತ್ತು ಕಾಶಿಪಟ್ಣ ಸಂಜೀವಿನಿ ಶೆಡ್ ನಲ್ಲಿ ನಡೆದ ಕಾಮಧೇನು ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಶ್ರೀಮತಿ ಜಯಲಕ್ಷ್ಮಿ ಮತ್ತು ಗ್ರಾಮ ಸಂಪನ್ಮೂಲ ವ್ಯಕ್ತಿ ಶ್ರೀಮತಿ ವಾಣಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭ ತಾಲೂಕು ಐಇಸಿ ಸಂಯೋಜಕರು ವಿನಿಷ, ಗ್ರಾ.ಪಂ ಸಿಬ್ಬಂದಿ ರೇಷ್ಮಾ ,ಅಂಗನವಾಡಿ ಕಾರ್ಯಕರ್ತೆ, ಎಮ್.ಬಿ.ಕೆ, ಎಲ್ .ಸಿ.ಆರ್.ಪಿ, ಪಶು ಸಖಿ ಉಪಸ್ಥಿತರಿದ್ದರು.

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

Suddi Udaya

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
error: Content is protected !!