27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

ಬಾಯ೯: ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀ ರಾಮಲಲ್ಲನ ಪ್ರಾಣ ಪ್ರತಿಷ್ಠಾಪನೆಯನ್ನು ಇಡೀ ವಿಶ್ವವೇ ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ದೇಶವಿದೇಶಗಳಲ್ಲಿ ಹೋಮ ಹವನ ಯಜ್ಞಾಧಿ ಕಾರ್ಯಗಳು ನಡೆದು ರಾಷ್ಟ್ರಮಂದಿರ ಲೋಕಾರ್ಪಣೆಯನ್ನು ಕಣ್ತುಂಬಿಕೊಂಡ ಸಂದರ್ಭದಲ್ಲಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಬಾರ್ಯದಲ್ಲಿ ಕೂಡ ದೇವರಿಗೆ ವಿಶೇಷ ಪೂಜೆ ಹಾಗೂ ಊರ ಭಕ್ತರಿಂದ ಮತ್ತು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಹೊಸಮುಗ್ರು ತೆಕ್ಕಾರು ಇವರಿಂದ ಭಜನಾ ಸಂಕೀರ್ತನೆ , ಅನ್ನಸಂತರ್ಪಣೆ ನಡೆಯಿತು.


ತೆಕ್ಕಾರು, ಬಾರ್ಯ, ಪುತ್ತಿಲ ಗ್ರಾಮದ ಭಕ್ತರು ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯದಲ್ಲಿ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಂದರ ನೂರಿತ್ತಾಯ, ಉಪಾಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಪರಂ‌‌ರ್ದ ಗುತ್ತು, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪೈ, ಟ್ರಸ್ಟ್ ಪ್ರಮುಖರಾದ ಪ್ರಮೀಳಾ, ಶಿವರಾಮ, ನಾರಾಯಣ ಗೌಡ ಹಾಗೂ ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರವೀಣ್ ರೈ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್, ಸಿಬ್ಬಂದಿ ವರ್ಗ, ಸೇಸಪ್ಪ ಸಾಲ್ಯಾನ್, ಚೇತನ್ ಅದಮ, ಸುದರ್ಶನ್, ಗಣೇಶ್ ಕುಲಾಲ್, ಅರುಣ ಬಜೆಕಳ, ರಾಮಣ್ಣ ಗೌಡ, ಪ್ರಮೋದ್, ದಯಾನಂದ್ , ದಯಾಯಂತಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕಬಡ್ಡಿ ಪಂದ್ಯಾಟ: ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು: ಅನಂತೋಡಿ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭೂಸೇನೆಯಲ್ಲಿ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಮಾ.31 ರಂದು ಸೇವಾ ನಿವೃತ್ತಿ

Suddi Udaya

ಕಿನ್ನಿಗೋಳಿಯ ಐತಿಹಾಸಿಕ ಜಯದ ರೂವಾರಿ ಮಡಂತ್ಯಾರಿನ ಜೋಯೇಲ್ ಮೆಂಡೋನ್ಸಾ

Suddi Udaya
error: Content is protected !!