April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಉಜಿರೆ: ದೇಶದ ಶಾಲಾ ಮಕ್ಕಳಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆಸುವ ಮತ್ತು ಅವರನ್ನು ವಿಜ್ಞಾನಿಗಳನ್ನಾಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಮ್ಮಿಕೊಂಡಿದ್ದ 31ನೇ ರಾಜ್ಯಮಟ್ಟದ ವಿಜ್ಞಾನ ಸಮಾವೇಶವು ಕಲಬುರ್ಗಿ ಜಿಲ್ಲೆ ಸೇಡಮ್ ನ ಶ್ರೀ ಕೊತ್ತಲ ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ಜರುಗಿತು.

ಈ ಸಮಾವೇಶದಲ್ಲಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ, ಉಜಿರೆ(ರಾಜ್ಯ ಪಠ್ಯಕ್ರಮ)ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿಗಳಾದ ಅಧೀಷ್ ಬಿ. ಸಿ. ಮತ್ತು ಆಲಾಪ್ ಇವರು ಗ್ರಾಮೀಣ ಹಿರಿಯ ವಿಭಾಗದಲ್ಲಿ “Value addition for agri wastes and weeds” ಎಂಬ ಶೀರ್ಷಿಕೆಯಡಿ ವಿಜ್ಞಾನ ಯೋಜನೆ ಮಂಡಿಸಿರುತ್ತಾರೆ. ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಾದ ಸಚಿನ್ ಭಟ್ ಮತ್ತು ಸುಜನ್ ಗೌಡ ಇವರು ಗ್ರಾಮೀಣ ಕಿರಿಯ ವಿಭಾಗದಲ್ಲಿ “Value Added products of unused Banana fibres” ಎಂಬ ಶೀರ್ಷಿಕೆಯಡಿ ವಿಜ್ಞಾನ ಯೋಜನೆ ಮಂಡಿಸಿರುತ್ತಾರೆ.
ಈ ಎರಡು ತಂಡಗಳು ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತವೆ.

ಈ ಸ್ಪರ್ಧೆಯಲ್ಲಿ ರಾಜ್ಯದಾದ್ಯಂತ ಒಟ್ಟು 121 ತಂಡಗಳು ಭಾಗವಹಿಸಿದ್ದವು.
ಇವರಿಗೆ ಶಿಕ್ಷಕಿಯರಾದ ಶ್ರೀಮತಿ ಧನ್ಯವತಿ ಮತ್ತು ಶ್ರೀಮತಿ ಶೋಭಾ ಎಸ್ ಇವರು ಸಹಕರಿಸಿರುತ್ತಾರೆ. ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾ ಲಕ್ಷ್ಮಿ ಎನ್. ನಾಯಕ್ ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿರುತ್ತಾರೆ.

Related posts

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ಗುಂಡೂರಿ: ಮುದ್ದಾಡಿ ನಿವಾಸಿ ಪುರಲ್ಲ ನಿಧನ

Suddi Udaya

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya

ಸುಲ್ಕೇರಿ: ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya
error: Content is protected !!