ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಬೆಳ್ತಂಗಡಿ: ಕುತ್ತಾರಿನ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿ ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ವ್ಯಕ್ತಿ ಕೆಳಗೆ ಬಿದ್ದು ಮೃತಪಟ್ಟ ದುರ್ಘಟನೆ ಉಳ್ಳಾಲದಲ್ಲಿ ನಡೆದಿದೆ.

ವಿಶ್ವಾಂಬರನ್ (58ವ) ಮೃತಪಟ್ಟ ವ್ಯಕ್ತಿ. ಇವರು ಕೊಣಾಜೆ ಮೂರ್ತೆದಾರರ ಸಂಘದ ಮಾಜಿ ನಿರ್ದೇಶಕರಾಗಿದ್ದರು.

ಮುಂಜಾನೆ ಮನೆಯ ಸಮೀಪದ ಮರದಿಂದ ಶೇಂದಿ ತೆಗೆಯಲು ಮರ ಹತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಮೂಲತ: ಧರ್ಮಸ್ಥಳ ಪುದುವೆಟ್ಟು ನಿವಾಸಿಯಾಗಿದ್ದ ಮೃತರು ಸದ್ಯ ಸಂತೋಷ ನಗರ ಕುಟುಂಬ ಸಮೇತರಾಗಿ ನೆಲೆಸಿದ್ದಾರೆ. ಕುತ್ತಾರಿಗೆ ಬಂದು ನೆಲೆಸಿರುವ ಇವರು ಶೇಂದಿ ತೆಗೆಯುವ ಗುತ್ತಿಗೆ ವಹಿಸಿಕೊಂಡಿದ್ದರು.

ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Leave a Comment

error: Content is protected !!