24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

ಬೆಳ್ತಂಗಡಿ: ಕುತ್ತಾರಿನ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿ ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ವ್ಯಕ್ತಿ ಕೆಳಗೆ ಬಿದ್ದು ಮೃತಪಟ್ಟ ದುರ್ಘಟನೆ ಉಳ್ಳಾಲದಲ್ಲಿ ನಡೆದಿದೆ.

ವಿಶ್ವಾಂಬರನ್ (58ವ) ಮೃತಪಟ್ಟ ವ್ಯಕ್ತಿ. ಇವರು ಕೊಣಾಜೆ ಮೂರ್ತೆದಾರರ ಸಂಘದ ಮಾಜಿ ನಿರ್ದೇಶಕರಾಗಿದ್ದರು.

ಮುಂಜಾನೆ ಮನೆಯ ಸಮೀಪದ ಮರದಿಂದ ಶೇಂದಿ ತೆಗೆಯಲು ಮರ ಹತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಮೂಲತ: ಧರ್ಮಸ್ಥಳ ಪುದುವೆಟ್ಟು ನಿವಾಸಿಯಾಗಿದ್ದ ಮೃತರು ಸದ್ಯ ಸಂತೋಷ ನಗರ ಕುಟುಂಬ ಸಮೇತರಾಗಿ ನೆಲೆಸಿದ್ದಾರೆ. ಕುತ್ತಾರಿಗೆ ಬಂದು ನೆಲೆಸಿರುವ ಇವರು ಶೇಂದಿ ತೆಗೆಯುವ ಗುತ್ತಿಗೆ ವಹಿಸಿಕೊಂಡಿದ್ದರು.

ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Related posts

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya

ಕುಕ್ಕೇಡಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆ ಅಧ್ಯಕ್ಷರಾಗಿ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ವೇದಾವತಿ ಆಯ್ಕೆ

Suddi Udaya

ಕಲ್ಮಂಜ ನಿವಾಸಿ ಶಿವಾನಂದ ಪ್ರಭು ನಿಧನ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ಶಿಕ್ಷಣ ಸಂಯೋಜಕರಾಗಿ ಎಡ್ವರ್ಡ್ ಡಿಸೋಜ ಆಯ್ಕೆ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

Suddi Udaya
error: Content is protected !!