22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

ಬೆಳ್ತಂಗಡಿ: ಕುತ್ತಾರಿನ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿ ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ವ್ಯಕ್ತಿ ಕೆಳಗೆ ಬಿದ್ದು ಮೃತಪಟ್ಟ ದುರ್ಘಟನೆ ಉಳ್ಳಾಲದಲ್ಲಿ ನಡೆದಿದೆ.

ವಿಶ್ವಾಂಬರನ್ (58ವ) ಮೃತಪಟ್ಟ ವ್ಯಕ್ತಿ. ಇವರು ಕೊಣಾಜೆ ಮೂರ್ತೆದಾರರ ಸಂಘದ ಮಾಜಿ ನಿರ್ದೇಶಕರಾಗಿದ್ದರು.

ಮುಂಜಾನೆ ಮನೆಯ ಸಮೀಪದ ಮರದಿಂದ ಶೇಂದಿ ತೆಗೆಯಲು ಮರ ಹತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಮೂಲತ: ಧರ್ಮಸ್ಥಳ ಪುದುವೆಟ್ಟು ನಿವಾಸಿಯಾಗಿದ್ದ ಮೃತರು ಸದ್ಯ ಸಂತೋಷ ನಗರ ಕುಟುಂಬ ಸಮೇತರಾಗಿ ನೆಲೆಸಿದ್ದಾರೆ. ಕುತ್ತಾರಿಗೆ ಬಂದು ನೆಲೆಸಿರುವ ಇವರು ಶೇಂದಿ ತೆಗೆಯುವ ಗುತ್ತಿಗೆ ವಹಿಸಿಕೊಂಡಿದ್ದರು.

ಮೃತರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Related posts

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್ ಘೋಷಣೆ

Suddi Udaya

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಗಲ್ಫ್ ನ ಓಮಾನ್ ದೇಶದಲ್ಲಿ, ಗುರುವಾಯನಕೆರೆಯ “ಹೋಟೆಲ್ ರೆಯ್ಸ್ ಇನ್” ಮಾಲಕ ವಿಜಯ್ ಮತ್ತು ಜೇನ್ ಡಿಕುನ್ಹಾ ದಂಪತಿಗಳ “ದಬಕ್ ದಬಾ” ಕಲಾವಿದರ ಹುಮ್ಮಸಿನ ಪ್ರದರ್ಶನ ಹಾಗೂ ಜಯಭೇರಿ

Suddi Udaya

ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ

Suddi Udaya

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya
error: Content is protected !!